ಬೆಂಗಳೂರು: ಸ್ಮಾರ್ಟ್ ಫೋನ್ ಗಾಗಿ ಕಳ್ಳತನ ಮಾಡಲು ಪ್ರಾರಂಭಿಸಿದ ಅಪ್ರಾಪ್ತ ಬಾಲಕನೊಬ್ಬ ಬರೋಬ್ಬರಿ ರೂ. 4 ಲಕ್ಷಕ್ಕೂ ಅಧಿಕ ಹಣ ಕದ್ದು ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಈ ಬಾಲಕನ ಸ್ನೇಹಿತರು ದುಬಾರಿ ಫೋನ್ ಬಳಸಿ ಸೋಷಿಯಲ್ ಮೀಡಿಯಾದಲ್ಲಿ ನಿರತರಾಗಿರುತ್ತಿದ್ದರು. ಅವರನ್ನು ನೋಡಿ ಬಾಲಕನಿಗೂ ಮೊಬೈಲ್ ತೆಗೆದುಕೊಳ್ಳುವ ಆಸೆಯಾಗಿದೆ. ಇದಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದಾನೆ. ನಗರದ ಪ್ರತಿಷ್ಠಿತ ಏರಿಯಾದ ನಾಲ್ಕು ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆ.

ಬಾಲಕ ಜೂ. 9ರಂದು ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆಯ ನಾಲ್ಕು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿದ್ದಾನೆ. ಒಂದು ಅಂಗಡಿಯಲ್ಲಿ ರೂ. 4 ಸಾವಿರ ಹಾಗೂ ಮತ್ತೊಂದು ಅಂಗಡಿಯಲ್ಲಿ ರೂ. 4 ಲಕ್ಷ ದೋಚಿದ್ದಾನೆ.

ಈ ಕುರಿತು ಅಂಗಡಿ ಮಾಲೀಕರು ಸಿಸಿಟಿವಿ ವಿಡಿಯೋ ಸಹಿತ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪ್ರಾಪ್ತನನ್ನು ಪತ್ತೆ ಹಚ್ಚಿ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ!!

ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ಯುವರಾಜ್ ಸಿಂಗ್ ಗೆ ಮೋಸ ಮಾಡಿದವರು ಯಾರು?

ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಜನ ಚುರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ. ಹಾಗಾದ್ರೆ ಯುವಿ ಬೆನ್ನಿಗೆ ಚೀರಿಹಾಕಿದವರು ಯಾರು ಎನ್ನುವುದೇ ಇಲ್ಲಿ ಮುಖ್ಯ ಪ್ರಶ್ನೆ.