ಹೊಸದೆಹಲಿ: ಲಡಾಖ್ನ ಗಲ್ವಾನ್ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76 ಜನ ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಅವರಿಗೆ ಗಂಭೀರ ಗಾಯಗಳಿಲ್ಲ. ಎಲ್ಲರೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 18 ಜನ ಯೋಧರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದ್ದು ಅವರಿಗೆ 15 ದಿನಗಳ ರಜೆ ನೀಡಲಾಗಿದೆ. ಇನ್ನುಳಿದ 56 ಜನ ಯೋಧರು ಒಂದು ವಾರದಲ್ಲಿ ಮರಳಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಗಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಬಿ.ಕೆ.ಸಂತೋಷ್ ಬಾಬು ಅವರ ತಂಡ, ಚೀನಾ ಪಡೆಗಳ ಟೆಂಟ್ಗಳನ್ನು ತೆಗೆಯುವುದಕ್ಕೆ ಮುಂದಾಗಿತ್ತು. ಈ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.
ಅಲ್ಲದೇ, ಚೀನಾದ 45 ಜನ ಸೈನಿಕರು ಸಾವನ್ನಪ್ಪಿದ್ದರು ಎಂದು ಸೇನಾಮೂಲಗಳು ತಿಳಿಸಿವೆ.