ಹೊಸದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76 ಜನ ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಅವರಿಗೆ ಗಂಭೀರ ಗಾಯಗಳಿಲ್ಲ. ಎಲ್ಲರೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 18 ಜನ ಯೋಧರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದ್ದು ಅವರಿಗೆ 15 ದಿನಗಳ ರಜೆ ನೀಡಲಾಗಿದೆ. ಇನ್ನುಳಿದ 56 ಜನ ಯೋಧರು ಒಂದು ವಾರದಲ್ಲಿ ಮರಳಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಗಲ್ವಾನ್‌ ಕಣಿವೆಯಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಬಿ.ಕೆ.ಸಂತೋಷ್‌ ಬಾಬು ಅವರ ತಂಡ, ಚೀನಾ ಪಡೆಗಳ ಟೆಂಟ್‌ಗಳನ್ನು ತೆಗೆಯುವುದಕ್ಕೆ ಮುಂದಾಗಿತ್ತು. ಈ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

ಅಲ್ಲದೇ, ಚೀನಾದ 45 ಜನ ಸೈನಿಕರು ಸಾವನ್ನಪ್ಪಿದ್ದರು ಎಂದು ಸೇನಾಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.

ಚೀಟಿ ಎತ್ತುವ ಮೂಲಕ ಹುಡುಗನೊಂದಿಗೆ ಮದುವೆ

ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…