ಕೊರೊನಾ ಭಯ : ಇಂದು ವಿಕಾಸಸೌಧಕ್ಕೆ ರಜೆ!

vidhana soudha

vidhana soudha

ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ರಜೆ ನೀಡಲಾಗಿದೆ.
ಇತ್ತೀಚೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ವ್ಯಕ್ತಿಯೊಬ್ಬರು ವಿಕಾಸ ಸೌಧದಲ್ಲಿ ಸುತ್ತಾಡಿದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿತ್ತು. ಹೀಗಾಗಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮತ್ತು ವೈರಸ್ ಹರಡುವುದನ್ನು ತಪ್ಪಿಸಲು ಗುರುವಾರ ಸಂಜೆ ವಿಕಾಸಸೌಧ ಕಟ್ಟಡದ ಎಲ್ಲಾ ಕೊಠಡಿಗಳು ಮತ್ತು ಕಾರಿಡಾರ್ ಗಳಿಗೆ ಬಿ.ಬಿ.ಎಂ.ಪಿ. ವತಿಯಿಂದ ಕ್ರಿಮಿ ನಾಶಕವನ್ನು ಪೂರ್ಣ ಪ್ರಮಾಣದಲ್ಲಿ ಸಿಂಪಡಣೆ ಮಾಡಲಾಯಿತು.
ಈ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಇಂದು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

Exit mobile version