ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ ವಿಚಾರಣೆ ಕೂಡ ನಡೆಸಿದ್ದಾರೆ.

ಸದ್ಯ ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೂರು ದಿನ ಮೊದಲೇ ತಮ್ಮ ಸಿಬ್ಬಂದಿ ಹಾಗೂ ಮನೆ ಕೆಲಸದವರಿಗೆ ಸಂಬಳ ಸೇರಿದಂತೆ ಇನ್ನಿತರ ಹಣವನ್ನು ಸಂದಾಯ ಮಾಡಿದ್ದರು ಎಂದು ತಿಳಿದು ಬಂದಿದೆ.

ಸಂಬಳ ನೀಡಿದ ಮೇಲೆ ಸಿಬ್ಬಂದಿಗಳಿಗೆ, ಇನ್ನು ಮುಂದೆ ನಾನು ಸಂಬಳ ನೀಡಲು ಆಗುತ್ತೋ, ಇಲ್ಲವೋ ಎಂದು ಮಾರ್ಮಿಕವಾಗಿ ಹೇಳಿದ್ದರು ಎಂದು ತನಿಖೆ ವೇಳೆ ತಿಳಿದಿದೆ. ಜೂ. 8ರಂದು ಸುಶಾಂತ್ ಅವರ ಮಾಜಿ ಮ್ಯಾನೇಜರ್‌ ದಿಶಾ ಸಾಲಿಯಾನ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದರು. ಆಗಿನಿಂದ ಸುಶಾಂತ ಆಘಾತಕ್ಕೊಳಗಾಗಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರಿಗೆ ಈ ಘಟನೆ ಮತ್ತಷ್ಟು ಘಾಸಿ ಮಾಡಿತ್ತು. ಬಹುಕೋಟಿ ವೆಚ್ಚದ ವೆಬ್‌ ಸಿರೀಸ್‌ನಲ್ಲಿ ನಟಿಸುವುದರ ಕುರಿತು ಸುಶಾಂತ್, ಮಾಜಿ ಮ್ಯಾನೇಜರ್ ಜೊತೆ ಮಾತನಾಡಿದ್ದರು ಎನ್ನಲಾಗಿದೆ.

ನಟಿ ರಿಯಾ ಚರ್ಕವರ್ತಿ ಅವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ನಿರ್ದೇಶಕ ಶೇಖರ್ ಕಪೂರ್‌ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ತಂದ ಸಂಕಷ್ಟ – ಉದ್ಯೋಗಸ್ಥರಲ್ಲಿ ಮನೆ ಮಾಡುತ್ತಿದೆ ಒತ್ತಡ!

ನವದೆಹಲಿ : ಕೊರೊನಾ ಹಾವಳಿಯಿಂದ ಇಡೀ ಜಗತ್ತೇ ಇಂದು ಆತಂಕದಲ್ಲಿ ಕಾಲ ಕಳೆಯುತ್ತಿದೆ. ಇದು ಉದ್ಯೋಗದ ಮೇಲೆಯೂ ಪರಿಣಾಮ ಬೀರಿದೆ. ಇದರಿಂದಾಗಿ ಉದ್ಯೋಗಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಕೆರೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗದಗ: ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆರೆಗಳ ಸರ್ವೇ ಕಾರ್ಯವನ್ನು ಕೈಗೊಂಡು ರಾಜಕಾಲುವೆಗಳ…