ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ ವಿಚಾರಣೆ ಕೂಡ ನಡೆಸಿದ್ದಾರೆ.

ಸದ್ಯ ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೂರು ದಿನ ಮೊದಲೇ ತಮ್ಮ ಸಿಬ್ಬಂದಿ ಹಾಗೂ ಮನೆ ಕೆಲಸದವರಿಗೆ ಸಂಬಳ ಸೇರಿದಂತೆ ಇನ್ನಿತರ ಹಣವನ್ನು ಸಂದಾಯ ಮಾಡಿದ್ದರು ಎಂದು ತಿಳಿದು ಬಂದಿದೆ.

ಸಂಬಳ ನೀಡಿದ ಮೇಲೆ ಸಿಬ್ಬಂದಿಗಳಿಗೆ, ಇನ್ನು ಮುಂದೆ ನಾನು ಸಂಬಳ ನೀಡಲು ಆಗುತ್ತೋ, ಇಲ್ಲವೋ ಎಂದು ಮಾರ್ಮಿಕವಾಗಿ ಹೇಳಿದ್ದರು ಎಂದು ತನಿಖೆ ವೇಳೆ ತಿಳಿದಿದೆ. ಜೂ. 8ರಂದು ಸುಶಾಂತ್ ಅವರ ಮಾಜಿ ಮ್ಯಾನೇಜರ್‌ ದಿಶಾ ಸಾಲಿಯಾನ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದರು. ಆಗಿನಿಂದ ಸುಶಾಂತ ಆಘಾತಕ್ಕೊಳಗಾಗಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರಿಗೆ ಈ ಘಟನೆ ಮತ್ತಷ್ಟು ಘಾಸಿ ಮಾಡಿತ್ತು. ಬಹುಕೋಟಿ ವೆಚ್ಚದ ವೆಬ್‌ ಸಿರೀಸ್‌ನಲ್ಲಿ ನಟಿಸುವುದರ ಕುರಿತು ಸುಶಾಂತ್, ಮಾಜಿ ಮ್ಯಾನೇಜರ್ ಜೊತೆ ಮಾತನಾಡಿದ್ದರು ಎನ್ನಲಾಗಿದೆ.

ನಟಿ ರಿಯಾ ಚರ್ಕವರ್ತಿ ಅವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ನಿರ್ದೇಶಕ ಶೇಖರ್ ಕಪೂರ್‌ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ದುಬೈನಲ್ಲಿಯೂ ನೆಲೆಸಿತು ಬಸವಣ್ಣನವರ ಪ್ರತಿಮೆ!

ಬೆಂಗಳೂರು : ಕ್ರಾಂತಿಕಾರಿ ಬಸವಣ್ಣನ ವಚನ, ಸಾಹಿತ್ಯದ ಮಹತ್ವ ಹಾಗೂ ವಿಚಾರಧಾರೆ ದೇಶದ ಗಡಿಯಾಚೆಗೂ ಪಸರಿಸಿದೆ.ಎಂ.ಬಿ.ಪಾಟೀಲ್…

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.