ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ ವಿಚಾರಣೆ ಕೂಡ ನಡೆಸಿದ್ದಾರೆ.

ಸದ್ಯ ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೂರು ದಿನ ಮೊದಲೇ ತಮ್ಮ ಸಿಬ್ಬಂದಿ ಹಾಗೂ ಮನೆ ಕೆಲಸದವರಿಗೆ ಸಂಬಳ ಸೇರಿದಂತೆ ಇನ್ನಿತರ ಹಣವನ್ನು ಸಂದಾಯ ಮಾಡಿದ್ದರು ಎಂದು ತಿಳಿದು ಬಂದಿದೆ.

ಸಂಬಳ ನೀಡಿದ ಮೇಲೆ ಸಿಬ್ಬಂದಿಗಳಿಗೆ, ಇನ್ನು ಮುಂದೆ ನಾನು ಸಂಬಳ ನೀಡಲು ಆಗುತ್ತೋ, ಇಲ್ಲವೋ ಎಂದು ಮಾರ್ಮಿಕವಾಗಿ ಹೇಳಿದ್ದರು ಎಂದು ತನಿಖೆ ವೇಳೆ ತಿಳಿದಿದೆ. ಜೂ. 8ರಂದು ಸುಶಾಂತ್ ಅವರ ಮಾಜಿ ಮ್ಯಾನೇಜರ್‌ ದಿಶಾ ಸಾಲಿಯಾನ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದರು. ಆಗಿನಿಂದ ಸುಶಾಂತ ಆಘಾತಕ್ಕೊಳಗಾಗಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರಿಗೆ ಈ ಘಟನೆ ಮತ್ತಷ್ಟು ಘಾಸಿ ಮಾಡಿತ್ತು. ಬಹುಕೋಟಿ ವೆಚ್ಚದ ವೆಬ್‌ ಸಿರೀಸ್‌ನಲ್ಲಿ ನಟಿಸುವುದರ ಕುರಿತು ಸುಶಾಂತ್, ಮಾಜಿ ಮ್ಯಾನೇಜರ್ ಜೊತೆ ಮಾತನಾಡಿದ್ದರು ಎನ್ನಲಾಗಿದೆ.

ನಟಿ ರಿಯಾ ಚರ್ಕವರ್ತಿ ಅವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ನಿರ್ದೇಶಕ ಶೇಖರ್ ಕಪೂರ್‌ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಲೆಗೈದ ಪಾಪಿಗಳು!

ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.