ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ ವಿಚಾರಣೆ ಕೂಡ ನಡೆಸಿದ್ದಾರೆ.

ಸದ್ಯ ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೂರು ದಿನ ಮೊದಲೇ ತಮ್ಮ ಸಿಬ್ಬಂದಿ ಹಾಗೂ ಮನೆ ಕೆಲಸದವರಿಗೆ ಸಂಬಳ ಸೇರಿದಂತೆ ಇನ್ನಿತರ ಹಣವನ್ನು ಸಂದಾಯ ಮಾಡಿದ್ದರು ಎಂದು ತಿಳಿದು ಬಂದಿದೆ.

ಸಂಬಳ ನೀಡಿದ ಮೇಲೆ ಸಿಬ್ಬಂದಿಗಳಿಗೆ, ಇನ್ನು ಮುಂದೆ ನಾನು ಸಂಬಳ ನೀಡಲು ಆಗುತ್ತೋ, ಇಲ್ಲವೋ ಎಂದು ಮಾರ್ಮಿಕವಾಗಿ ಹೇಳಿದ್ದರು ಎಂದು ತನಿಖೆ ವೇಳೆ ತಿಳಿದಿದೆ. ಜೂ. 8ರಂದು ಸುಶಾಂತ್ ಅವರ ಮಾಜಿ ಮ್ಯಾನೇಜರ್‌ ದಿಶಾ ಸಾಲಿಯಾನ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದರು. ಆಗಿನಿಂದ ಸುಶಾಂತ ಆಘಾತಕ್ಕೊಳಗಾಗಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರಿಗೆ ಈ ಘಟನೆ ಮತ್ತಷ್ಟು ಘಾಸಿ ಮಾಡಿತ್ತು. ಬಹುಕೋಟಿ ವೆಚ್ಚದ ವೆಬ್‌ ಸಿರೀಸ್‌ನಲ್ಲಿ ನಟಿಸುವುದರ ಕುರಿತು ಸುಶಾಂತ್, ಮಾಜಿ ಮ್ಯಾನೇಜರ್ ಜೊತೆ ಮಾತನಾಡಿದ್ದರು ಎನ್ನಲಾಗಿದೆ.

ನಟಿ ರಿಯಾ ಚರ್ಕವರ್ತಿ ಅವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ನಿರ್ದೇಶಕ ಶೇಖರ್ ಕಪೂರ್‌ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾದ ಮಧ್ಯೆಯೂ ಸಂಗ್ರಹವಾದ ಜಿಎಸ್ ಟಿ ಮೊತ್ತ ಎಷ್ಟು ಗೊತ್ತಾ?

ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು…

ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ : ಸಚಿವ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.

ಎನ್ ಪಿಎಸ್ ರದ್ದುಗೊಳಿಸಲು ಆಗ್ರಹಿಸಿ ನಿಡಗುಂದಿಯಲ್ಲಿ ಬೈಕ್ ರ್ಯಾಲಿ

ಉತ್ತರಪ್ರಭ ಸುದ್ದಿ ನಿಡಗುಂದಿ: ಎನ್ ಪಿಎಸ್ ನೌಕರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಿಂದ ಹೊರಟಿರುವ ಓಪಿಎಸ್…