ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ಖಾನೆ ಸ್ಥಗಿತಗೊಂಡ ಸಂದರ್ಭದಲ್ಲಿ ಬಾಯಿ ಮುಚ್ಚಿಕೊಂಡು ಇದ್ದವರು ಈಗ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ತಮ್ಮ ಆವೇಶ ತೋರಿಸುತ್ತಿದ್ದಾರೆ. ಇದು ಅವರ ಸ್ವಾರ್ಥ ರಾಜಕಾರಣಕ್ಕೆ ಹಿಡಿದ ಕನ್ನಡಿ. ಹೋರಾಟದ ನೆಪದಲ್ಲಿ ಕಾರ್ಖಾನೆ ಆರಂಭವಾಗದಂತೆ ನೋಡಿಕೊಳ್ಳುವುದೇ ಅವರ ಮೂಲ ಉದ್ಧೇಶ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದಲ್ಲಿ ಕಾರ್ಖಾನೆ ಆರಂಭವಾಗದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳುತ್ತಿದ್ದಾರೆ. ಉಗ್ರ ಹೋರಾಟ ಎಂಬ ಮಾತನ್ನು ಹೇಳುವ ನೈತಿಕತೆ ಅವರಿಗಿಲ್ಲ. ಸದ್ಯ ಯಾವ ಚುನಾವಣೆ ಇಲ್ಲ. ಹೀಗಿದ್ದರೂ ಕಾರ್ಖಾನೆ ತೆರೆಯಲು ನೀವು ಬಿಡುತ್ತಿಲ್ಲ. ಖಾಸಗೀಕರಣ ಮಾಡಿ ಕಾರ್ಖಾನೆ ತೆರೆದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ಕೊಡುತ್ತಾರೆ. ನಿಮ್ಮದು ಉಗ್ರ ಹೋರಾಟವಲ್ಲ. ಸ್ವಾರ್ಥ ರಾಜಕಾರಣ ಎಂದರು.

ದ್ವಂದ್ವ ನಿಲುವಿನ ಹೋರಾಟದಿಂದ ಯಾರನ್ನೂ ಮೋಸಗೊಳಿಸುವುದಕ್ಕೆ ಸಾಧ್ಯವಿಲ್ಲ. ಇದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ಮೈಶುಗರ್ ಕಾರ್ಖಾನೆ ಆರಂಭವಾಗದೆ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀವು ಮಾಡುವ ಅಡಚಣೆಯಿಂದ ಕಾರ್ಖಾನೆ ಈಗಲೂ ಆರಂಭಗೊಳ್ಳದೆ ಇನ್ನಷ್ಟು ರೈತರು ಆತ್ಮಹತ್ಯೆಗೆ ಶರಣಾದರೆ ಅದಕ್ಕೆ ನೀವೇ ಹೊಣೆಯಾಗುತ್ತೀರಿ ಎಂದು ಎಚ್ಚರಿಸಿದರು.

Leave a Reply

Your email address will not be published. Required fields are marked *

You May Also Like

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಶಾಸಕ ಬಂಡಿ ಅವರಿಗೆ ಎಸ್‌ಎಫ್‌ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ

ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.

ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ!!

ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.