ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ ಜಸಂಗ್ಭಾಯ್ ಸೋಲಂಕಿ ಆಂಬುಲೆನ್ಸ್ ನಲ್ಲಿ ಆಗಮಿಸಿದರು. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯಲು ಮತಾರ್ ಕ್ಷೇತ್ರದ ಶಾಸಕರಾಗಿರುವ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಮತದಾನ ಪ್ರಯುಕ್ತ ಆಸ್ಪತ್ರೆಯಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದರು. ರಾಜ್ಯದಿಂದ 4 ರಾಜ್ಯಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.
You May Also Like
ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?
ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.
- ಉತ್ತರಪ್ರಭ
- October 12, 2020
ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ
ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.
- ಉತ್ತರಪ್ರಭ
- January 27, 2021