ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟಿದ್ದ ಉದ್ಯಾನವನ ಇದ್ದು ಇಲ್ಲದಂತಾಗಿದೆ. ಅನ್ನದಾನೇಶ್ವರ ಶಿಕ್ಷಣ ಸಂಸ್ಥೆಗೆ ನಿತ್ಯವೂ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲೆಯಲು ಬರುತ್ತಾರೆ. ಈ ಶಿಕ್ಷಣ ಸಂಸ್ಥೆಯಲ್ಲಿ ಹಲವು ಅಂಗ ಸಂಸ್ಥೆಗಳಿವೆ. ಇದೇ ಉದ್ಯಾನವನ ಎದರಿಗೆ ಮೂರ್ನಾಲ್ಕು ವಿದ್ಯಾರ್ಥಿನಿಯರ ವಸತಿ ನಿಲಯಗಳು ಇವೆ. ಹಾಗೂ ಕಿವುಡ & ಮೂಕರ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಇದೆ ಇವರಿಗೆಲ್ಲ ಪ್ರಶಾಂತ ವಾತವರಣ ಸಿಗಲಿ. ಬಿಡುವಿನ ಸಮಯವನ್ನು ಉದ್ಯಾನವನದಲ್ಲಿ ಕಳೆಯಲಿ ಹಾಗೂ 17ನೇ ವಾರ್ಡಿನ ನಾಗರಿಕರ ಆರೋಗ್ಯಕ್ಕೆ ಪೂರಕವಾಗಲಿ ಎಂದು 2016ನೇ ಈ ಉದ್ಯಾನವನ ನಿರ್ಮಿಸಲಾಯಿತು.

ಲಕ್ಷಲಕ್ಷ ಖರ್ಚು ನೀರಿನಲ್ಲಿ ಹೋಮ
ಅಂದಾಜು ವೆಚ್ಚ 11.60 ಲಕ್ಷ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಸರಿಯಾದ ನಿರ್ವಹಣೆ ಇಲ್ಲದೆ ಉದ್ಯಾನವನದಲ್ಲಿ ಒಂದು ಗಿಡವೂ ಬೆಳೆದಿಲ್ಲ. ಹಾಗೂ ಬೆಳೆಯಲು ನೀರಿನ ವ್ಯವಸ್ಥೆಯೂ ಇಲ್ಲ. ಹೀಗಾಗಿ ಎಲ್ಲಿಯೂ ಹಸಿರಿಲ್ಲ. ಕುಳಿತುಕೊಳ್ಳಲು ಹಾಕಿದ ಕುರ್ಚಿಗಳು ಇಲ್ಲ. ಕಸ, ಕಡ್ಡಿ ಜಾಲಿಕಂಟಿ ಬೆಳೆದು ಈಗ ಈ ಉದ್ಯಾನವನವೂ ಹಂದಿಗಳ, ದನಕರುಗಳ ತಂಗುದಾಣವಾಗಿದೆ.

ಹಲವು ವರ್ಷಗಳೇ ಕಳೆದರು ಒಂದು ಗಿಡವನ್ನು ನೆಡದ ಸಿಬ್ಬಂದಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಇನ್ನಾದರೂ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಉದ್ಯಾನವನ ಹಚ್ಚಹರಿಸಿನಿಂದ ಕಂಗೊಳಿಸುವಂತೆ ಆಗಲಿ

– ಡಾ. ಶಿವಕುಮಾರ ಮಹಾಸ್ವಾಮಿಗಳು, ಪಿಠಾಧಿಪತಿಗಳು ಸಿದ್ದಕೊಳ್ಳಮಠ


ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು ಸಾರ್ವಜನಿಕರ ಹಣದಿಂದ ನಿರ್ಮಿಸಲ್ಪಟ್ಟಿದ್ದ ಉದ್ಯಾನವನ ಇಂದು ಪಾಳು ಬಿಳಲು ಪಟ್ಟಣ ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂಬುದು ಸ್ಥಳೀಯರ ಆರೋಪ.

ಹಲವು ವರ್ಷಗಳೇ ಕಳೆದರು ಒಂದು ಗಿಡವನ್ನು ನೆಡದ ಸಿಬ್ಬಂದಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಇನ್ನಾದರೂ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಉದ್ಯಾನವನ ಹಚ್ಚಹರಿಸಿನಿಂದ ಕಂಗೊಳಿಸುವಂತೆ ಆಗಲಿ
– ಡಾ. ಶಿವಕುಮಾರ ಮಹಾಸ್ವಾಮಿಗಳು, ಪಿಠಾಧಿಪತಿಗಳು ಸಿದ್ದಕೊಳ್ಳಮಠ

Leave a Reply

Your email address will not be published. Required fields are marked *

You May Also Like

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಂಬಾಭವಾನಿ ಜಾತ್ರಾ ಉತ್ಸವ ಸಡಗರ ಸಂಭ್ರಮ ಕೃಷ್ಣೆ ತಟದಲ್ಲಿ ಕುಂಭ ಮೆರವಣಿಗೆ ಕಲರವ

ಚಿತ್ರ ವರದಿ : ಗುಲಾಬಚಂದ ಆರ್.ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಬೆಳ್ಳಂ ಬೆಳಿಗ್ಗೆ ತಂಪಾಗಿ ಸೂಸಿ ಬರುತ್ತಿದ್ದ…

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…