ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಆಸ್ತಿ ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ ದೂರು ಇದೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣ ವಿಚಾರಣೆ ಹಂತದಲ್ಲಿದೆ.
ಎಂಟಿಬಿ ಹೆಸರಲ್ಲಿ ಒಟ್ಟು ರೂ. 884 ಕೋಟಿ ಆಸ್ತಿ, ಪತ್ನಿ ಹೆಸರಲ್ಲಿ ರೂ. 331 ಕೋಟಿ ಆಸ್ತಿ ಇದೆ ಎಂದು ಘೋಷಿಸಿದ್ದಾರೆ. ಎಂಟಿಬಿ ಹೆಸರಲ್ಲಿ ರೂ. 461 ಕೋಟಿ ಚರಾಸ್ತಿ, ರೂ. 416 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಶಾಂತಕುಮಾರಿ ಹೆಸರಿನಲ್ಲಿ ರೂ. 160 ಕೋಟಿ ಚರಾಸ್ಥಿ, ರೂ. 179 ಸ್ಥಿರಾಸ್ಥಿ ಇದೆ. ಅಲ್ಲದೇ, ಎಂಟಿಬಿ ರೂ. 2.23 ಕೋಟಿ ಮೌಲ್ಯದ ವಜ್ರ, ಪ್ಲಾಟಿನಂ, ಚಿನ್ನಾಭರಣ ಹೊಂದಿದ್ದಾರೆ.
ಎಂಟಿಬಿ ನಾಗರಾಜ್ ಬಳಿ ನಗದು ರೂ. 32.60 ಲಕ್ಷ ಇದೆ. ಎಂಟಿಬಿ ಪತ್ನಿ ಶಾಂತಕುಮಾರಿ ಬಳಿ ನಗದು ರೂ. 45.60 ಲಕ್ಷ ರೂ. ಇದೆ. ಅಲ್ಲದೇ ಎಂಟಿಬಿ ಬ್ಯಾಂಕ್ ಸೇವಿಂಗ್ಸ್ ಖಾತೆಯಲ್ಲಿ 20.26 ಕೋಟಿ ರೂ. ಇದೆ. ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ ಮೊತ್ತ ರೂ. 144.41 ಕೋಟಿ ಇದೆ. ಪತ್ನಿ ಹೆಸರಿನಲ್ಲಿ ಬ್ಯಾಂಕ್ ಸೇವಿಂಗ್ಸ್ ರೂ. 11.21 ಕೋಟಿ, ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ ರೂ. 34.08 ಕೋಟಿ ಇದೆ.
ಎಂಟಿಬಿ 52.75 ಕೋಟಿ ರೂ. ಸಾಲಗಾರ ಆಗಿದ್ದಾರೆ. ಪತ್ನಿ ಮಾಡಿರುವ ಸಾಲ 1.97 ಕೋಟಿ ರೂ. ಎಂದು ಆಸ್ತಿ ವಿವರದಲ್ಲಿ ಘೋಷಿಸಿಕೊಂಡಿದ್ದಾರೆ. ಎಂಟಿಬಿ ಬಳಿ ಲ್ಯಾಂಡ್ ರೋವರ್, ಮರ್ಸಿಡೀಸ್, ಟೊಯೋಟಾ ಮತ್ತು ಹುಂಡೈ ಕಂಪೆನಿಗಳ ಐಷಾರಾಮಿ ಕಾರುಗಳಿವೆ. ಕಾರುಗಳ ಒಟ್ಟು ಮೌಲ್ಯ 2.48 ಕೋಟಿ ರೂ. ಪತ್ನಿ ಬಳಿ ಇರುವ ಏಕೈಕ ಐಷಾರಾಮಿ ಕಾರು ಪಾರ್ಶ್ (ಪೋರ್ಶೆ), ಬೆಲೆ 1.72 ಕೋಟಿ ರೂ. ಆಗಿದೆ. ಇದಲ್ಲದೇ ಎಂಟಿಬಿ ಬಳಿ 54 ಎಕರೆ ಕೃಷಿ ಭೂಮಿ ಇದೆ. ಇದರ ಮಾರುಕಟ್ಟೆ ಮೌಲ್ಯ 29.86 ಕೋಟಿ ರೂ. ಆಗಿದೆ. ಪತ್ನಿ ಹೆಸರಲ್ಲಿ 4 ಎಕರೆ ಕೃಷಿ ಭೂಮಿ, ಇದರ ಮೌಲ್ಯ 26 ಕೋಟಿ ರೂ. ಆಗಿದೆ.

Leave a Reply

Your email address will not be published. Required fields are marked *

You May Also Like

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಕೊರೊನಾ ಸಂದಿಗ್ಧತೆ: ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಸಂವಾದ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ…

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.