ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಆಸ್ತಿ ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ ದೂರು ಇದೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣ ವಿಚಾರಣೆ ಹಂತದಲ್ಲಿದೆ.
ಎಂಟಿಬಿ ಹೆಸರಲ್ಲಿ ಒಟ್ಟು ರೂ. 884 ಕೋಟಿ ಆಸ್ತಿ, ಪತ್ನಿ ಹೆಸರಲ್ಲಿ ರೂ. 331 ಕೋಟಿ ಆಸ್ತಿ ಇದೆ ಎಂದು ಘೋಷಿಸಿದ್ದಾರೆ. ಎಂಟಿಬಿ ಹೆಸರಲ್ಲಿ ರೂ. 461 ಕೋಟಿ ಚರಾಸ್ತಿ, ರೂ. 416 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಶಾಂತಕುಮಾರಿ ಹೆಸರಿನಲ್ಲಿ ರೂ. 160 ಕೋಟಿ ಚರಾಸ್ಥಿ, ರೂ. 179 ಸ್ಥಿರಾಸ್ಥಿ ಇದೆ. ಅಲ್ಲದೇ, ಎಂಟಿಬಿ ರೂ. 2.23 ಕೋಟಿ ಮೌಲ್ಯದ ವಜ್ರ, ಪ್ಲಾಟಿನಂ, ಚಿನ್ನಾಭರಣ ಹೊಂದಿದ್ದಾರೆ.
ಎಂಟಿಬಿ ನಾಗರಾಜ್ ಬಳಿ ನಗದು ರೂ. 32.60 ಲಕ್ಷ ಇದೆ. ಎಂಟಿಬಿ ಪತ್ನಿ ಶಾಂತಕುಮಾರಿ ಬಳಿ ನಗದು ರೂ. 45.60 ಲಕ್ಷ ರೂ. ಇದೆ. ಅಲ್ಲದೇ ಎಂಟಿಬಿ ಬ್ಯಾಂಕ್ ಸೇವಿಂಗ್ಸ್ ಖಾತೆಯಲ್ಲಿ 20.26 ಕೋಟಿ ರೂ. ಇದೆ. ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ ಮೊತ್ತ ರೂ. 144.41 ಕೋಟಿ ಇದೆ. ಪತ್ನಿ ಹೆಸರಿನಲ್ಲಿ ಬ್ಯಾಂಕ್ ಸೇವಿಂಗ್ಸ್ ರೂ. 11.21 ಕೋಟಿ, ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್ ರೂ. 34.08 ಕೋಟಿ ಇದೆ.
ಎಂಟಿಬಿ 52.75 ಕೋಟಿ ರೂ. ಸಾಲಗಾರ ಆಗಿದ್ದಾರೆ. ಪತ್ನಿ ಮಾಡಿರುವ ಸಾಲ 1.97 ಕೋಟಿ ರೂ. ಎಂದು ಆಸ್ತಿ ವಿವರದಲ್ಲಿ ಘೋಷಿಸಿಕೊಂಡಿದ್ದಾರೆ. ಎಂಟಿಬಿ ಬಳಿ ಲ್ಯಾಂಡ್ ರೋವರ್, ಮರ್ಸಿಡೀಸ್, ಟೊಯೋಟಾ ಮತ್ತು ಹುಂಡೈ ಕಂಪೆನಿಗಳ ಐಷಾರಾಮಿ ಕಾರುಗಳಿವೆ. ಕಾರುಗಳ ಒಟ್ಟು ಮೌಲ್ಯ 2.48 ಕೋಟಿ ರೂ. ಪತ್ನಿ ಬಳಿ ಇರುವ ಏಕೈಕ ಐಷಾರಾಮಿ ಕಾರು ಪಾರ್ಶ್ (ಪೋರ್ಶೆ), ಬೆಲೆ 1.72 ಕೋಟಿ ರೂ. ಆಗಿದೆ. ಇದಲ್ಲದೇ ಎಂಟಿಬಿ ಬಳಿ 54 ಎಕರೆ ಕೃಷಿ ಭೂಮಿ ಇದೆ. ಇದರ ಮಾರುಕಟ್ಟೆ ಮೌಲ್ಯ 29.86 ಕೋಟಿ ರೂ. ಆಗಿದೆ. ಪತ್ನಿ ಹೆಸರಲ್ಲಿ 4 ಎಕರೆ ಕೃಷಿ ಭೂಮಿ, ಇದರ ಮೌಲ್ಯ 26 ಕೋಟಿ ರೂ. ಆಗಿದೆ.

Leave a Reply

Your email address will not be published. Required fields are marked *

You May Also Like

ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!

ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಪ್ರಧಾನಿಯ ಮನ್ ಕಿ ಬಾತ್ ಏನು?

ದೆಹಲಿ: ಇಂದು ಪ್ರದಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನ ಮಾಸಿಕ ಸಂಚಿಕೆಯಲ್ಲಿ…

ಹೆಚ್ಚಿದ ಕೊರೊನಾ ಆತಂಕ – ವಿದ್ಯಾಗಮಕ್ಕೆ

ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.