ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.
ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಈ ಮಹಿಳೆ ವಾಸ ಮಾಡಿದ್ದ ಕಟ್ಟಡದಲ್ಲಿಯೇ ವ್ಯಕ್ತಿಯೊಬ್ಬರಿಗೆ ಕೊರೊನಾ ಅಂಟಿಕೊಂಡಿದೆ. ಆದರೆ, ಆ ವ್ಯಕ್ತಿ ಕೆಲವು ದಿನಗಳಿಂದ ಅಲ್ಲಿಯೇ ವಾಸವಾಗಿದ್ದಾರೆ. ಅಷ್ಟೊತ್ತಿಗಾಗಲೇ ಈ ಮಹಿಳೆಗೂ ಕೊರೊನಾ ಆವರಿಸಿದೆ.
ನಂತರ ಇವರು ಕೂಡ ಮನೆಯವರೊಂದಿಗೆ ಚೆನ್ನಾಗಿಯೇ ಇದ್ದಾರೆ. ಆ ನಂತರ ಇವರು ನಾಲಿಗೆ ರುಚಿ ಕಳೆದುಕೊಂಡಿದ್ದಾರೆ. ನಂತರ ತಲೆ ನೋವು, ಜ್ವರ, ಶೀತ ಆವರಿಸಿದೆ. ಅಷ್ಟೊತ್ತಿಗಾಗಲೇ ಕೊರೊನಾ ಆವರಿಸಿದ್ದು, ತಿಳಿದು ಬಂದಿದೆ. ಕೈ ಮೀರಿದ ಮೇಲೆ ಮಾಸ್ಕ್ ಹಾಕಿಕೊಂಡಿದ್ದಾರೆ.
ಕೊನೆಗೆ ಕೊರೊನಾ ಇರುವುದು ಖಚಿತವಾಗಿದೆ. ಸದ್ಯ ಮಹಾಮಾರಿಯಿಂದ ಗುಣಮುಖರಾಗಿದ್ದು, ಆರಾಮಾಗಿದ್ದಾರೆ. ಹೀಗಾಗಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರೂ ಮನೆಯಲ್ಲಿದ್ದರೂ ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸ್ಯಾನಿಟೈಸರ್ ಬಳಕೆ ಮಾಡುವಂತೆ ಮನವಿ ಮಾಡಿದ್ದಾರೆ.


ಆದರೆ, ಎಲ್ಲರೂ ಮನೆಯಲ್ಲಿ ಮಾಸ್ಕ್ ಹಾಕಿಕೊಳ್ಳಬೇಕು ಎಂಬುದರ ಕುರಿತು ದೇಶದ ವೈದ್ಯರು ಸಹಮತ ವ್ಯಕ್ತಪಡಿಸಿಲ್ಲ. ಇನ್ನು ಕೆಲವರು ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ, ಹೊರಗೆ ಹೋದ ಸಮಯದಲ್ಲಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂಬುದು ಬಹುತೇಕರ ಹೇಳಿಕೆಯಾಗಿದೆ.

https://m.facebook.com/story.php?story_fbid=935859056895234&id=268114290336384

Leave a Reply

Your email address will not be published. Required fields are marked *

You May Also Like

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.

ಸಂಕನೂರ್ ಅಂದಪ್ಪ ಅವರ ಸಮಾಜ ಸೇವೆ ಇತರರಿಗೂ ಆದರ್ಶ

ನಿಸ್ವಾರ್ಥ ಸಮಾಜ ಸೇವಕರ ಪೈಕಿ ಗಜೇಂದ್ರಗಡದ ಹೆಮ್ಮೆಯ ಸರಳ ಸಜ್ಜನಿಕೆಯ ಯುವಕ ಅಂದಪ್ಪ ಕಳಕಪ್ಪ ಸಂಕನೂರ ಕೂಡ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಾರದು. ಶಿಕ್ಷಣ ಪ್ರೇಮಿ ಅಂದಪ್ಪ ಅವರು, ಶ್ರೇಷ್ಠ ವರ್ತಕ ದಿ. ಬಂಗಾರಬಸಪ್ಪ ಸಂಕನೂರ ಅವರ ಮೊಮ್ಮಗನಾಗಿದ್ದು, ಸಂಕನೂರ ಅಂದಪ್ಪ ಎಂದೇ ಚಿರಪರಿಚಿತರು.

ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಸಭೆಯಲ್ಲಿ ನೀಡಿದ ಸೂಚನೆಗಳು

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ನಗರಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಉತ್ತರಪ್ರಭಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ  ಅಭ್ಯರ್ಥಿಗಳ ಹೆಸರು ಅಂತಿಮ 35 ವಾರ್ಡಗಳ…