ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ ಪಿಯು ಪರೀಕ್ಷೆ ಕೂಡ ಮುಗಿದಿವೆ. ಕೊರೊನಾದ ಈ ಸಂಕಷ್ಟದಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಸಚಿವರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಈ ಕುರಿತು ಹಲಸೂರು ಗೇಟ್ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಬಲವಂತವಾಗಿ ಪರೀಕ್ಷೆ ನಡೆಸುತ್ತಿದ್ದು, ಇದು ಮಕ್ಕಳ ಆರೋಗ್ಯದೃಷ್ಟಿಯಿಂದ ಬಹಳಷ್ಟು ಅಪಾಯ ಎಂದು ಆರೋಪಿಸಲಾಗಿದೆ. ಈಗಾಗಲೇ ತೆಲಂಗಾಣ ಮತ್ತು ಆಂದ್ರಪ್ರದೇಶದಲ್ಲಿ ಪರೀಕ್ಷೆ ರದ್ದು ಮಾಡಿದ್ದು ರಾಜ್ಯದಲ್ಲಿ ಮಾತ್ರ ಶಿಕ್ಷಣ ಸಚಿವರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿಕ್ಷಣ ಸಚಿವರು ಪರಿಕ್ಷೆ ನಡೆಸುವ ಕುರಿತು ಪರೀಕ್ಷಾ ಮಂಡಳಿಯ ಸದಸ್ಯರ ಸಹಿಯಿಲ್ಲದೆ, ತಾವೊಬ್ಬರೆ ನಿರ್ಧಾರ ಕೈಗೊಂಡಿದ್ದಾರೆ. ಪರೀಕ್ಷಾ ಮಂಡಳಿ ತೆಗೆದುಕೊಳ್ಳಬೇಕಿದ್ದ ತಿರ್ಮಾನವನ್ನು ಸಚಿವರು ತೆಗೆದುಕೊಂಡಿದ್ದು ಎಷ್ಟು ಸರಿ? ಪಾಲಕರ ಆತಂಕ ಹಾಗೂ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲೆ ದೂರು ದಾಖಲಿಸಿದ್ದೇವೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಅಧ್ಯಕ್ಷ ಆದರ್ಶ್‌ ಅಯ್ಯರ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್