ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ. ದೇಶಾದ್ಯಂತ ಕೊರೊನಾ ಪರೀಕ್ಷೆಗೆ ಏಕರೂಪತೆ ಇರಬೇಕು. ಜೊತೆಗೆ, ವಾರ್ಡ್ ಗಳಲ್ಲಿ ಸಿಸಿಟಿವಿ ಇರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಡಿ ಕೊರೊನಾ ರೋಗಿಗಳಿಗೆ ಮತ್ತು ಕೊರೊನಾ ಕಾರಣದಿಂದ ಮಡಿದವರ ಶವ ಸಂಸ್ಕಾರ ಮಾರ್ಗಸೂಚಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ, ಪರಿಣತರ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದಿತು. ಜೊತೆಗೆ, ರೋಗಿಗಳ ಚಿಕಿತ್ಸೆಗೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಮತ್ತು ಶವಸಂಸ್ಕಾರ ವಿಷಯದಲ್ಲಿ ಯಾವುದೇ ಅಡ್ಡಿಗಳಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸುತ್ತಿರುವ ರೈಲ್ವೆ ಇಲಾಖೆ!

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಎಷ್ಟು ಗೊತ್ತಾ?

ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ.