ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ. ದೇಶಾದ್ಯಂತ ಕೊರೊನಾ ಪರೀಕ್ಷೆಗೆ ಏಕರೂಪತೆ ಇರಬೇಕು. ಜೊತೆಗೆ, ವಾರ್ಡ್ ಗಳಲ್ಲಿ ಸಿಸಿಟಿವಿ ಇರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಡಿ ಕೊರೊನಾ ರೋಗಿಗಳಿಗೆ ಮತ್ತು ಕೊರೊನಾ ಕಾರಣದಿಂದ ಮಡಿದವರ ಶವ ಸಂಸ್ಕಾರ ಮಾರ್ಗಸೂಚಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ, ಪರಿಣತರ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದಿತು. ಜೊತೆಗೆ, ರೋಗಿಗಳ ಚಿಕಿತ್ಸೆಗೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಮತ್ತು ಶವಸಂಸ್ಕಾರ ವಿಷಯದಲ್ಲಿ ಯಾವುದೇ ಅಡ್ಡಿಗಳಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ರುಂಡವನ್ನೇ ಕತ್ತರಿಸಿ ಪ್ರಿಯಕರನಿಗೆ ಅರ್ಪಿಸಿದ!

ಹೈದರಾಬಾದ್ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ಅವಳ ರುಂಡವನ್ನೇ ಕತ್ತರಿಸಿ ಪ್ರಿಯಕರನ ಮನೆಯ ಮುಂದೆ ಇಟ್ಟ ಘಟನೆ ನಡೆದಿದೆ.

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್  ನಿಧನ

ಬ್ರಿಸ್ಬೇನ್: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್(52) ಶುಕ್ರವಾರದಂದು ನಿಧನರಾಗಿದ್ದಾರೆ.ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು…

ಆಹಾರ ಕಿಟ್ ಗಾಗಿ: ಶಾಸಕರ ಮನೆಗೆ ಮುತ್ತಿಗೆ

ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್ಗಳನ್ನು ಕೊಡಿ ಎಂದು ಆಗ್ರಹಿಸಿದರು.