ದೆಹಲಿ: ಲಡಾಖ್ ನ ಗಲ್ವಾನ್ ವ್ಯಾಲಿ ಕದನದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸರ್ವಪಕ್ಷಗಳ ಸಭೆಯನ್ನು ಆನ್ಲೈನ್ ಮೂಲಕ ನಡೆಸಿದರು.

ಸಭೆಯಲ್ಲಿ ಸುಮಾರು 20 ಪಕ್ಷಗಳು ಭಾಗವಹಿಸಿದ್ದವು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಡಿದ ಯೋಧರಿಗೆ ಅಂತಿಮ ನಮನವನ್ನು ಸಲ್ಲಿಸಲಾಯಿತು.
ಆದರೆ, ಈ ಕುರಿತು ತಕರಾರು ತೆಗೆದಿರುವ ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್, ರಾಷ್ಟ್ರೀಯ ಜನತಾ ದಳ ಬಿಹಾರದಲ್ಲಿ ಅತ್ಯಂತ ದೊಡ್ಡ ಪಕ್ಷ ಮತ್ತು 5 ಲೋಕಸಭೆ ಸದಸ್ಯರನ್ನು ಹೊಂದಿದೆ. ಆದರೆ, ನಮ್ಮನ್ನು ಸರ್ವ ಪಕ್ಷಗಳ ಸಭೆಗೆ ಆಹ್ವಾನಿಸಿಲ್ಲ. ನಮ್ಮನ್ನು ಏಕೆ ಸಭೆಗೆ ಆಹ್ವಾನಿಸಿಲ್ಲ ಎಂಬುದರ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು.
ಅನಂತರ ದೆಹಲಿಯಲ್ಲಿ ಮನೋಜ್ ಜ್ಹಾ ಮತ್ತು ಮಿಸಾ ಭಾರ್ತಿ ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಕ್ರಿಯಿಸಿದ ಮನೋಜ್, ಸರ್ವ ಪಕ್ಷಗಳ ಸಭೆಗೆ ನಮಗೆ ಆಹ್ವಾನ ನೀಡದಿರುವುದಕ್ಕೆ ನಮಗೆ ಅಸಮಾಧಾನವಾಗಿದೆ ಎಂದರು.
ಇಂದಿನ ಸಭೆಯಲ್ಲಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಎನ್ ಸಿ ಪಿ ನಾಯಕ ಶರದ್ ಪವಾರ್, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್, ಆಂದ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಸಿಪಿಐ ನಾಯಕ ಡಿ.ರಾಜಾ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮೊದಲಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು : ಪ್ರಧಾನಿಗೆ ಸಾಕ್ಷಿ ಪ್ರಶ್ನೆ

ಕೇಂದ್ರ ಕ್ರೀಡಾ ಸಚಿವಾಲಯ ಈ ಬಾರಿಯ ಅರ್ಜುನ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಆದರೆ, ಎಲ್ಲರೂ ನಿರೀಕ್ಷೆ ಮಾಡಿದ್ದ ಸಾಕ್ಷಿ ಮಲಿಕ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ನಾನು ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಾಕ್ಷಿ ಪ್ರಶ್ನಿಸಿದ್ದಾರೆ.

‘ಪುಷ್ಪ’ ಜಾತಿ ಬಿರುಗಾಳಿಯಲ್ಲಿ

ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ…