ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ ಏಕೆ ಗೆಲ್ಲಲಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದಮ್ ಇಲ್ಲ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದು ನಾವು ನಮ್ಮ ದಮ್ ತೋರಿಸಿದ್ದಿವಿ. ಬಿಜೆಪಿ ವಿಧಾನ ಪರಿಷತ್ತಿಗೆ ಎಂಟಿಬಿ ನಾಗರಾಜ್, ಶಂಕರ್ ಗೆ ಟಿಕೇಟ್ ನೀಡಿದ್ದು ಜಾತಿ ಲೆಕ್ಕಾಚಾರದ ಮೇಲೆ ಅಲ್ಲ. ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣ ತೀರಿಸಿದ್ದೇವೆ. ಆದ್ರೆ ಮೊನ್ನೆ ತನಕ ಎಮ್ಎಲ್ಸಿ ಆಗಿದ್ದ ರೇವಣ್ಣ ಅವರಿಗೂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಪ್ರತಿಯೊಂದರಲ್ಲೂ ಜಾತಿ ಲೆಕ್ಕಾಚಾರ ಹಾಕುವ ಸಿದ್ದರಾಮಯ್ಯ, ಈವರೆಗೆ ಜಾತಿಯನ್ನು ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ. ಇನ್ನಾದ್ರು ಸ್ವಾರ್ಥ ಬಿಡಬೇಕು. ಸಿಎಂ ಆಗುವವರೆಗೆ ಮಾತ್ರ ಹಿಂದುಳಿದವರು, ದಲಿತರು ಅನ್ನುತ್ತಿದ್ದ ಸಿದ್ದರಾಮಯ್ಯ, ಸಿಎಂ ಆದ ಮೇಲೆ ಎಲ್ಲರನ್ನೂ ಮರೆತರು. ಇನ್ಮೆಲೆ ಜಾತಿ ವಿಚಾರ ಎತ್ತಬೇಡಿ. ಸಿಎಂ ಯಡಿಯೂರಪ್ಪ ಅವರಿಗೆ ದಮ್ಮ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಪಾಕ್ ರೂಪದರ್ಶಿಗೆ ಟ್ರೋಲ್ ಮಾಡುತ್ತಿರುವ ಕಿಡಿಗೇಡಿಗಳು!

ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಕೊರೊನಾ ಸೋಂಕಿತರಿಗೆ ಈ ಔಷಧಿ ನೀಡಬಾರದಂತೆ

ರೋಗಿಗಳು ಎಷ್ಟೇ ಅನಾರೋಗ್ಯಕ್ಕೆ ತುತ್ತಾಗಿದ್ದರೂ ಅವರಿಗೆ ಗಿಲೀಡ್‌ನ ರೆಮ್ಡೆಸಿವಿರ್ ಔಷಧ ನೀಡುವುದನ್ನು ಶಿಫಾರಸು ಮಾಡುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!

ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…