ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ ಏಕೆ ಗೆಲ್ಲಲಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದಮ್ ಇಲ್ಲ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದು ನಾವು ನಮ್ಮ ದಮ್ ತೋರಿಸಿದ್ದಿವಿ. ಬಿಜೆಪಿ ವಿಧಾನ ಪರಿಷತ್ತಿಗೆ ಎಂಟಿಬಿ ನಾಗರಾಜ್, ಶಂಕರ್ ಗೆ ಟಿಕೇಟ್ ನೀಡಿದ್ದು ಜಾತಿ ಲೆಕ್ಕಾಚಾರದ ಮೇಲೆ ಅಲ್ಲ. ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣ ತೀರಿಸಿದ್ದೇವೆ. ಆದ್ರೆ ಮೊನ್ನೆ ತನಕ ಎಮ್ಎಲ್ಸಿ ಆಗಿದ್ದ ರೇವಣ್ಣ ಅವರಿಗೂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಪ್ರತಿಯೊಂದರಲ್ಲೂ ಜಾತಿ ಲೆಕ್ಕಾಚಾರ ಹಾಕುವ ಸಿದ್ದರಾಮಯ್ಯ, ಈವರೆಗೆ ಜಾತಿಯನ್ನು ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ. ಇನ್ನಾದ್ರು ಸ್ವಾರ್ಥ ಬಿಡಬೇಕು. ಸಿಎಂ ಆಗುವವರೆಗೆ ಮಾತ್ರ ಹಿಂದುಳಿದವರು, ದಲಿತರು ಅನ್ನುತ್ತಿದ್ದ ಸಿದ್ದರಾಮಯ್ಯ, ಸಿಎಂ ಆದ ಮೇಲೆ ಎಲ್ಲರನ್ನೂ ಮರೆತರು. ಇನ್ಮೆಲೆ ಜಾತಿ ವಿಚಾರ ಎತ್ತಬೇಡಿ. ಸಿಎಂ ಯಡಿಯೂರಪ್ಪ ಅವರಿಗೆ ದಮ್ಮ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.