ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ ಏಕೆ ಗೆಲ್ಲಲಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದಮ್ ಇಲ್ಲ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದು ನಾವು ನಮ್ಮ ದಮ್ ತೋರಿಸಿದ್ದಿವಿ. ಬಿಜೆಪಿ ವಿಧಾನ ಪರಿಷತ್ತಿಗೆ ಎಂಟಿಬಿ ನಾಗರಾಜ್, ಶಂಕರ್ ಗೆ ಟಿಕೇಟ್ ನೀಡಿದ್ದು ಜಾತಿ ಲೆಕ್ಕಾಚಾರದ ಮೇಲೆ ಅಲ್ಲ. ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣ ತೀರಿಸಿದ್ದೇವೆ. ಆದ್ರೆ ಮೊನ್ನೆ ತನಕ ಎಮ್ಎಲ್ಸಿ ಆಗಿದ್ದ ರೇವಣ್ಣ ಅವರಿಗೂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಪ್ರತಿಯೊಂದರಲ್ಲೂ ಜಾತಿ ಲೆಕ್ಕಾಚಾರ ಹಾಕುವ ಸಿದ್ದರಾಮಯ್ಯ, ಈವರೆಗೆ ಜಾತಿಯನ್ನು ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ. ಇನ್ನಾದ್ರು ಸ್ವಾರ್ಥ ಬಿಡಬೇಕು. ಸಿಎಂ ಆಗುವವರೆಗೆ ಮಾತ್ರ ಹಿಂದುಳಿದವರು, ದಲಿತರು ಅನ್ನುತ್ತಿದ್ದ ಸಿದ್ದರಾಮಯ್ಯ, ಸಿಎಂ ಆದ ಮೇಲೆ ಎಲ್ಲರನ್ನೂ ಮರೆತರು. ಇನ್ಮೆಲೆ ಜಾತಿ ವಿಚಾರ ಎತ್ತಬೇಡಿ. ಸಿಎಂ ಯಡಿಯೂರಪ್ಪ ಅವರಿಗೆ ದಮ್ಮ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ಯುವರಾಜ್ ಸಿಂಗ್ ಗೆ ಮೋಸ ಮಾಡಿದವರು ಯಾರು?

ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಜನ ಚುರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ. ಹಾಗಾದ್ರೆ ಯುವಿ ಬೆನ್ನಿಗೆ ಚೀರಿಹಾಕಿದವರು ಯಾರು ಎನ್ನುವುದೇ ಇಲ್ಲಿ ಮುಖ್ಯ ಪ್ರಶ್ನೆ.

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು