ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ ಏಕೆ ಗೆಲ್ಲಲಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದಮ್ ಇಲ್ಲ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದು ನಾವು ನಮ್ಮ ದಮ್ ತೋರಿಸಿದ್ದಿವಿ. ಬಿಜೆಪಿ ವಿಧಾನ ಪರಿಷತ್ತಿಗೆ ಎಂಟಿಬಿ ನಾಗರಾಜ್, ಶಂಕರ್ ಗೆ ಟಿಕೇಟ್ ನೀಡಿದ್ದು ಜಾತಿ ಲೆಕ್ಕಾಚಾರದ ಮೇಲೆ ಅಲ್ಲ. ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣ ತೀರಿಸಿದ್ದೇವೆ. ಆದ್ರೆ ಮೊನ್ನೆ ತನಕ ಎಮ್ಎಲ್ಸಿ ಆಗಿದ್ದ ರೇವಣ್ಣ ಅವರಿಗೂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಪ್ರತಿಯೊಂದರಲ್ಲೂ ಜಾತಿ ಲೆಕ್ಕಾಚಾರ ಹಾಕುವ ಸಿದ್ದರಾಮಯ್ಯ, ಈವರೆಗೆ ಜಾತಿಯನ್ನು ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ. ಇನ್ನಾದ್ರು ಸ್ವಾರ್ಥ ಬಿಡಬೇಕು. ಸಿಎಂ ಆಗುವವರೆಗೆ ಮಾತ್ರ ಹಿಂದುಳಿದವರು, ದಲಿತರು ಅನ್ನುತ್ತಿದ್ದ ಸಿದ್ದರಾಮಯ್ಯ, ಸಿಎಂ ಆದ ಮೇಲೆ ಎಲ್ಲರನ್ನೂ ಮರೆತರು. ಇನ್ಮೆಲೆ ಜಾತಿ ವಿಚಾರ ಎತ್ತಬೇಡಿ. ಸಿಎಂ ಯಡಿಯೂರಪ್ಪ ಅವರಿಗೆ ದಮ್ಮ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!

ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.

ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್!

ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…