ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇಶಾದ್ಯಂತ ಕೊರೊನಾ ಹಿನ್ನೆಲೆಯಲ್ಲಿ ಜನ ಜೀವನ ನಡೆಸುವುದು ದುಸ್ತರವಾಗಿದ್ದು, ಈ ಹಿನ್ನೆಲೆಯಲ್ಲಿ ಪೋಷಕರ ಹಿತ ಕಾಯಲು ರಾಜ್ಯ ಸರ್ಕಾರ ಮುಂದಾದಂತಾಗಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ, 1983ರಡಿಯಲ್ಲಿ ರಚಿಸಿರುವ ನಿಯಮಗಳು, 1999ರ ನಿಯಮ 4ರಲ್ಲಿ ಉಪ ನಿಯಮ (4)ರಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕಗಳನ್ನು ಸರ್ಕಾರ ನಿಗದಿ ಪಡಿಸಲು ಅವಕಾಶ ಕಲ್ಪಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ದಿ. 24.03.2020ರಿಂದ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದಾಗಿ ಕೈಗಾರಿಕೆಗಳು ಹಾಗೂ ಆರ್ಥಿಕ ಚಟುವಟಿಕೆಗಳು ಸ್ಥಬ್ಧವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಹಿನ್ನೆಲೆಯಲ್ಲಿ, ಖಾಸಗಿ ಅನುದಾನ ರಹಿತ ಶಾಲೆಗಳ ಪೋಷಕರು ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ಹೆಚ್ಚಿಸದಂತೆ ಶಾಲಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸಾಕಷ್ಟು ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ ಎಂದು ಪೋಷಕರ ಮನವಿಯನ್ನು ಉಲ್ಲೇಖಿಸಲಾಗಿದೆ.
ಆದ್ದರಿಂದ, ಕರ್ನಾಟಕ ಶಿಕ್ಷಣ ನಿಯಮ 1999ರಲ್ಲಿ ಕಲ್ಪಿಸಿರುವ ಅವಕಾಶವನ್ನು ಸರ್ಕಾರ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983, ಸೆಕ್ಷನ್-133, ಉಪ ನಿಯಮ-(2)ರ ಅಡಿಯಲ್ಲಿನ ಅಧಿಕಾರವನ್ನು ಚಲಾಯಿಸಿ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಸೂಚಿಸಿದೆ.

ಸರ್ಕಾರದ ಆದೇಶದ ಪ್ರತಿ

ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸುವಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರಡಿ ಕ್ರಮ ಜರುಗಿಸಲಾಗುವುದೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ಧಾರವಾಡ ವಿಧಾನ ಪರಿಷತ್ ಚುಣಾವಣೆ ; ಸಲೀಂ ಅಹ್ಮದ ಭರ್ಜರಿ ಜಯ

ಉತ್ತರಪ್ರಭ ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.