ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇಶಾದ್ಯಂತ ಕೊರೊನಾ ಹಿನ್ನೆಲೆಯಲ್ಲಿ ಜನ ಜೀವನ ನಡೆಸುವುದು ದುಸ್ತರವಾಗಿದ್ದು, ಈ ಹಿನ್ನೆಲೆಯಲ್ಲಿ ಪೋಷಕರ ಹಿತ ಕಾಯಲು ರಾಜ್ಯ ಸರ್ಕಾರ ಮುಂದಾದಂತಾಗಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ, 1983ರಡಿಯಲ್ಲಿ ರಚಿಸಿರುವ ನಿಯಮಗಳು, 1999ರ ನಿಯಮ 4ರಲ್ಲಿ ಉಪ ನಿಯಮ (4)ರಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕಗಳನ್ನು ಸರ್ಕಾರ ನಿಗದಿ ಪಡಿಸಲು ಅವಕಾಶ ಕಲ್ಪಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ದಿ. 24.03.2020ರಿಂದ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದಾಗಿ ಕೈಗಾರಿಕೆಗಳು ಹಾಗೂ ಆರ್ಥಿಕ ಚಟುವಟಿಕೆಗಳು ಸ್ಥಬ್ಧವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಹಿನ್ನೆಲೆಯಲ್ಲಿ, ಖಾಸಗಿ ಅನುದಾನ ರಹಿತ ಶಾಲೆಗಳ ಪೋಷಕರು ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ಹೆಚ್ಚಿಸದಂತೆ ಶಾಲಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸಾಕಷ್ಟು ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ ಎಂದು ಪೋಷಕರ ಮನವಿಯನ್ನು ಉಲ್ಲೇಖಿಸಲಾಗಿದೆ.
ಆದ್ದರಿಂದ, ಕರ್ನಾಟಕ ಶಿಕ್ಷಣ ನಿಯಮ 1999ರಲ್ಲಿ ಕಲ್ಪಿಸಿರುವ ಅವಕಾಶವನ್ನು ಸರ್ಕಾರ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983, ಸೆಕ್ಷನ್-133, ಉಪ ನಿಯಮ-(2)ರ ಅಡಿಯಲ್ಲಿನ ಅಧಿಕಾರವನ್ನು ಚಲಾಯಿಸಿ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಸೂಚಿಸಿದೆ.

ಸರ್ಕಾರದ ಆದೇಶದ ಪ್ರತಿ

ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸುವಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರಡಿ ಕ್ರಮ ಜರುಗಿಸಲಾಗುವುದೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ…

Как скачать приложение Мостбет в Казахстане на Android и iOS Информация от компаний Астаны

Мостбет КЗ официальный сайт Mostbet KZ, регистрация и бонусы Content Финансовые транзакции:…

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.