ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ ಮುಂದುವರೆದಿದೆ. ಜಗತ್ತಿನಲ್ಲಿ ಇಲ್ಲಿಯವರೆಗೂ ಈ ಮಹಾಮಾರಿಗೆ 4.62 ಲಕ್ಷ ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,95,812 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 2,14,206 ಜನ ಗುಣಮುಖರಾಗಿದ್ದು, 12,970 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ಆದರೆ, ನಿನ್ನೆ ಒಂದೇ ದಿನ 14,721 ಪ್ರಕರಣ ದಾಖಲಾಗಿವೆ.

ವಿಶ್ವದಲ್ಲಿ 87.57 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಮೆರಿಕದಲ್ಲಿ ಅತೀ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. 22.97 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿ 1.21 ಲಕ್ಷ ಜನರು ಬಲಿಯಾಗಿದ್ದಾರೆ. ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 10.38 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 49 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿಯೂ ಬ್ರೆಜಿಲ್ 2ನೇ ಸ್ಥಾನದಲ್ಲಿದೆ.

ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ. 5.69 ಲಕ್ಷ ಜನರಲ್ಲಿ ಸೋಂಕು ಹರಡಿದೆ. 7,800ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿಕೆ ಕಂಡಿದೆ. ಇಲ್ಲಿ 3.01 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 42,400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ

ಹಿಮಪಾತದಿಂದಾಗಿ ಉತ್ತರಾಖಂಡದ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹಲವು ವರ್ಷಗಳಲ್ಲಿ 139 ಜನರಿಂದ ಅತ್ಯಾಚಾರಕ್ಕೊಳಗಾದ ಮಹಿಳೆ

ಮಹಿಳೆಯೊಬ್ಬರಿಗೆ ಕೆಲವು ವರ್ಷಗಳಲ್ಲಿ 139 ಜನರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, 25 ವರ್ಷದ ಮಹಿಳೆ ಈ ಕುರಿತು ದೂರು ದಾಖಲಿಸಿದ್ದಾರೆ. ಈ ಸಂತ್ರಸ್ಥ ಮಹಿಳೆಗೆ 2010ರಲ್ಲಿ ವಿವಾಹವಾಗಿತ್ತು. ಆದರೆ, ಈ ಮಹಿಳೆ ಒಂದೇ ವರ್ಷದಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದರು. ಹೀಗಾಗಿ ಮಾಜಿ ಪತಿಯ ಕೆಲವು ಕುಟುಂಬ ಸದಸ್ಯರು ನನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.