ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡಿದೆ.

ಭಾರತೀಯ ಸೇನೆಯ ಎಂಜಿನಿಯರಿಂಗ್‌ ವಿಭಾಗ ಗಲ್ವಾನ್‌ ನದಿಗೆ 60 ಮೀಟರ್‌ ಉದ್ದನೆಯ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿದೆ. ಅಲ್ಲದೇ, ಈ ಸೂಕ್ಷ್ಮ ಪ್ರದೇಶದ ಮೇಲೆ ಭಾರತ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿದಂತಾಗಿದೆ. ಇದರೊಂದಿಗೆ ಭಾರತದ ಯುದ್ಧ ವಿಮಾನಗಳು ಗಡಿಯಲ್ಲಿ ಹಾರಾಟ ನಡೆಸಿ ಹದ್ದಿನ ಕಣ್ಣಿಟ್ಟಿವೆ.

ಗಲ್ವಾನ್‌ ನದಿ-ಶ್ಯೊಕ್‌ ನದಿ ಒಗ್ಗೂಡುವ ಸ್ಥಳದಿಂದ ಪೂರ್ವಕ್ಕೆ 3 ಕಿ.ಮೀ ಹಾಗೂ ಗಸ್ತು ಪಾಯಿಂಟ್‌ 14 (ಜೂನ್‌ 15ರಂದು ಮಾರಾಮಾರಿ ನಡೆದ ಸ್ಥಳ)ದಿಂದ 2 ಕಿ.ಮೀ ದೂರದಲ್ಲಿ ಸೇತುವೆ ನಿರ್ಮಾಣವಾಗಿದೆ. ಲಡಾಖ್‌ ಸಂಘರ್ಷವು ದಕ್ಷಿಣ ಚೀನಾ ಸಮುದ್ರ ವಿವಾದದಂತೆ ಅಲ್ಲ. ನಮ್ಮ ತಂಟೆಗೆ ಬಂದರೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ. ಒಪ್ಪಂದಗಳಿಗೆ ಬದ್ಧವಾಗಿ ನಡೆದುಕೊಳ್ಳಿ ಎಂದು ಭಾರತದ ಅಧಿಕಾರಿಗಳ ತಂಡವು ಚೀನಾಕ್ಕೆ ಖಡಕ್‌ ಎಚ್ಚರಿಕೆ ನೀಡಿದೆ.

ಗಲ್ವಾನ್‌ ಕಣಿವೆಯಲ್ಲಿ ಚೀನಾ ಪುಂಡಾಟಕ್ಕೆ ತಕ್ಕ ಪ್ರತ್ಯುತ್ತರ ನೀಡಲು ನಿಶ್ಚಯಿಸಿರುವ ಭಾರತೀಯ ವಾಯುಪಡೆ ತನ್ನ ಯುದ್ಧ ವಿಮಾನಗಳನ್ನು ಮುನ್ನೆಲೆಗೆ ತಂದು ಸನ್ನದ್ಧವಾಗಿಸಿದೆ. ಸುಖೋಯ್‌-30 ಎಂಕೆಐ, ಮಿರಾಜ್‌-2000, ಜಾಗ್ವಾರ್‌ ಯುದ್ಧ ವಿಮಾನಗಳು, ಅಪಾಚೆ ಹೆಲಿಕಾಪ್ಟರ್‌ ಹಾರಾಟ ನಡೆಸಿವೆ.

ಚೀನಾ ದೇಶ ನಮ್ಮ ದೇಶದ ಒಂದಿಂಚು ಭೂ ಭಾಗವನ್ನೂ ಅತಿಕ್ರಮಿಸಿಲ್ಲ. ಏಕಕಾಲದಲ್ಲಿ ಹಲವು ಕಡೆ ಸಂಚರಿಸಿ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತದ ಸಶಸ್ತ್ರ ಪಡೆಗಳಿಗೆ ಇದೆ ಎಂದು ಮೋದಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

2020ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು…

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.