ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ. ಬಂದಂಥಹವರಿಗೆ ಒಂದೊಂದು ಅವಕಾಶ ಆಗಿದೆ ಅದೇ ರೀತಿ ಮುಂದಿನದಿನ ವಿಶ್ವನಾಥ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ನಮಗೆ ಹತ್ತೂ ಜನರಿಗೆ ಒಂದು ಸಾರಿ ಅವಕಾಶ ಆಯಿತು. ಇದೀಗ ನಾಗರಾಜು‌ ಹಾಗೂ ಶಂಕರಗೆ‌ ಅವಕಾಶ ಆಗಿದೆ. ಮುನಿರತ್ನಂ ಹಾಗೂ ಪ್ರತಾಪಗೌಡ ಪಾಟೀಲ್ ಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗುತ್ತೆ ಎಲ್ಲವೂ ಹಂತಹಂತವಾಗಿ ಅವಕಾಶಗಳು ಸಿಗುತ್ತವೆ. ವಿಶ್ವನಾಥ‌ ಅವರಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಎಂಎಲ್ಸಿ ಸ್ಥಾನದ ಆಶ್ವಾಸನೆ‌ ನೀಡಿದ್ದಾರೆ. ಯಾರಿಗೂ ಕೂಡ‌ ಇಲ್ಲಾ ಅನ್ನುವ ಪ್ರಶ್ನೆ‌ಯೇ ಇಲ್ಲ. ಮುಖ್ಯಮಂತ್ರಿಗಳು ನುಡಿದಂತೆ‌ ನಡೆದಿದ್ದಾರೆ. ವಿಶ್ವನಾಥ ಸಮೇತ ಮುಖ್ಯಮಂತ್ರಿಗಳ‌ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದೇವೆ. ಸದ್ಯದಲ್ಲೇ ಮುಂದಿನ ಸಲ ಅವಕಾಶ ಕೊಡ್ತೆವೆ ಅಂತ ಹೇಳಿದ್ದಾರೆ. ಇದಕ್ಕೆ ವಿಶ್ವನಾಥ ಕೂಡ ಒಪ್ಪಿಕೊಂಡಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ದೆಹಲಿಯಿಂದ ಬಂದ ವಲಸಿಗರು – ಬೆಂಗಳೂರಿಗರಿಗೆ ಆತಂಕ!

ಬೆಂಗಳೂರು: ದೆಹಲಿ ಯಿಂದ ಗುರುವಾರ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ವಿಶೇಷ ರೈಲು ಬಂದಿದ್ದು, ಇಂದು ಮತ್ತೊಂದು…

ದಲಿತರ ಮೀಸಲಾತಿ ಕಸಿಯಲು ಯತ್ನಿಸುತ್ತಿದ್ದಾರೆ ; ಲಲಿತಾ

ಕುರುಬರ ಎಸ್ಟಿಷ ಮೀಸಲಾತಿಗಾಗಿ ಹೋರಾಡುತ್ತಾ ದಲಿತರ ಮೀಸಲಾತಿ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿದ್ದಾರೆ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..

ಅಪ್ಪಂದಿರ ದಿನಾಚರಣೆ ನಿಮಿತ್ಯ ಕವನ- ನನ್ನಪ್ಪ

ಜೀವನದುದ್ದಕ್ಕೂ ತನ್ನ ಗುಡಸಲಿನಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ…