ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ. ಬಂದಂಥಹವರಿಗೆ ಒಂದೊಂದು ಅವಕಾಶ ಆಗಿದೆ ಅದೇ ರೀತಿ ಮುಂದಿನದಿನ ವಿಶ್ವನಾಥ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ನಮಗೆ ಹತ್ತೂ ಜನರಿಗೆ ಒಂದು ಸಾರಿ ಅವಕಾಶ ಆಯಿತು. ಇದೀಗ ನಾಗರಾಜು‌ ಹಾಗೂ ಶಂಕರಗೆ‌ ಅವಕಾಶ ಆಗಿದೆ. ಮುನಿರತ್ನಂ ಹಾಗೂ ಪ್ರತಾಪಗೌಡ ಪಾಟೀಲ್ ಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗುತ್ತೆ ಎಲ್ಲವೂ ಹಂತಹಂತವಾಗಿ ಅವಕಾಶಗಳು ಸಿಗುತ್ತವೆ. ವಿಶ್ವನಾಥ‌ ಅವರಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಎಂಎಲ್ಸಿ ಸ್ಥಾನದ ಆಶ್ವಾಸನೆ‌ ನೀಡಿದ್ದಾರೆ. ಯಾರಿಗೂ ಕೂಡ‌ ಇಲ್ಲಾ ಅನ್ನುವ ಪ್ರಶ್ನೆ‌ಯೇ ಇಲ್ಲ. ಮುಖ್ಯಮಂತ್ರಿಗಳು ನುಡಿದಂತೆ‌ ನಡೆದಿದ್ದಾರೆ. ವಿಶ್ವನಾಥ ಸಮೇತ ಮುಖ್ಯಮಂತ್ರಿಗಳ‌ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದೇವೆ. ಸದ್ಯದಲ್ಲೇ ಮುಂದಿನ ಸಲ ಅವಕಾಶ ಕೊಡ್ತೆವೆ ಅಂತ ಹೇಳಿದ್ದಾರೆ. ಇದಕ್ಕೆ ವಿಶ್ವನಾಥ ಕೂಡ ಒಪ್ಪಿಕೊಂಡಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಅರಣ್ಯ ಇಲಾಖೆಯ ದೌರ್ಜನ್ಯ : ರೈತ ಮಹಿಳೆ ಬಲಿ

ಆಕ್ರೋಶಗೊಂಡ ಗ್ರಾಮಸ್ಥರು: ಅರಣ್ಯಾಧಿಕಾರಿಗಳ ದಿಗ್ಬಂಧನ ಉತ್ತರಪ್ರಭಮುಂಡರಗಿ: ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು…