ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗುತ್ತಿದೆ. ಇದರ ಮಧ್ಯೆ ಸೋಂಕಿತರಿಗೆ ಯಾವ ಮೂಲದಿಂದ ಕೊರೊನಾ ಬಂದಿದೆ ಎಂಬುವುದೇ ತಿಳಿಯುತ್ತಿಲ್ಲ.
ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ 41 ಪ್ರಕರಣಗಳು ನಿಗೂಢವಾಗಿಯೇ ಉಳಿದಿವೆ. ಈ ಪ್ರಕರಣಗಳ ಮೂಲವೇ ವೈದ್ಯರಿಗೆ ಹಾಗೂ ಜಿಲ್ಲಾಡಳಿತಕ್ಕೆ ಇನ್ನೂ ತಿಳಿಯುತ್ತಿಲ್ಲ. ಇದು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗುತ್ತಿದೆ.
ಇದರ ಜೊತೆ ಉಸಿರಾಟ ತೊಂದರೆಯಿಂದ 30 ಜನ, ವಿಷಮಶೀತ ಜ್ವರದಿಂದ 30 ಜನ ಕೊರೊನಾ ಪೀಡಿರಾಗಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊರ ರಾಜ್ಯಗಳು ಕಂಟಕವಾದರೆ ಬೆಂಗಳೂರಿಗೆ ನಿಗೂಢ, ಐಎಲ್ಐ ಹಾಗೂ ಸಾರಿ ಕೇಸ್ಗರಳು ಕಂಟಕವಾಗಿ ಕಾಡುತ್ತಿವೆ. ಇದು ಸಮುದಾಯಗಳಿಗೆ ಸೋಂಕು ಹಬ್ಬಲು ದಾರಿ ಮಾಡಿಕೊಡುತ್ತಿದೆ.