ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗುತ್ತಿದೆ. ಇದರ ಮಧ್ಯೆ ಸೋಂಕಿತರಿಗೆ ಯಾವ ಮೂಲದಿಂದ ಕೊರೊನಾ ಬಂದಿದೆ ಎಂಬುವುದೇ ತಿಳಿಯುತ್ತಿಲ್ಲ.

ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ 41 ಪ್ರಕರಣಗಳು ನಿಗೂಢವಾಗಿಯೇ ಉಳಿದಿವೆ. ಈ ಪ್ರಕರಣಗಳ ಮೂಲವೇ ವೈದ್ಯರಿಗೆ ಹಾಗೂ ಜಿಲ್ಲಾಡಳಿತಕ್ಕೆ ಇನ್ನೂ ತಿಳಿಯುತ್ತಿಲ್ಲ. ಇದು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗುತ್ತಿದೆ.

ಇದರ ಜೊತೆ ಉಸಿರಾಟ ತೊಂದರೆಯಿಂದ 30 ಜನ, ವಿಷಮಶೀತ ಜ್ವರದಿಂದ 30 ಜನ ಕೊರೊನಾ ಪೀಡಿರಾಗಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊರ ರಾಜ್ಯಗಳು ಕಂಟಕವಾದರೆ ಬೆಂಗಳೂರಿಗೆ ನಿಗೂಢ, ಐಎಲ್ಐ ಹಾಗೂ ಸಾರಿ ಕೇಸ್ಗರಳು ಕಂಟಕವಾಗಿ ಕಾಡುತ್ತಿವೆ. ಇದು ಸಮುದಾಯಗಳಿಗೆ ಸೋಂಕು ಹಬ್ಬಲು ದಾರಿ ಮಾಡಿಕೊಡುತ್ತಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.