ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯಿಸಿ ಮಸ್ಕಿ ತಾಲೂಕಿನ ಎನ್ಆರ್ ಬಿ ಸಿ ಕೆನಾಲ್ ಹೋರಾಟ ಸಮಿತಿ ಮುಖಂಡರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ ಫಲವಾಗಿ ಈ ಯೋಜನೆಯ ಡಿಪಿಆರ್ ವನ್ನು ಕೃಷ್ಣಭಾಗ್ಯ ಜಲ ನಿಗಮದ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಸರಕಾರ ಈ ಯೋಜನೆಗೆ ಮಂಜೂರಾತಿ ನೀಡಿಲ್ಲ. ಈ ಯೋಜನೆ ಜಾರಿಯಾದರೆ ರಾಯಚೂರು, ಕೊಪ್ಪಳ ಜಿಲ್ಲೆಗಳ 7 ಗ್ರಾಮಗಳ 72000 ಹೆಕ್ಟೇರ್ ಪ್ರದೇಶ ನೀರಾವರಿ ಪ್ರದೇಶ ಆಗಲಿದೆ. ಯೋಜನೆ ಮೊತ್ತ 2,755 ಕೋಟಿ ರೂ.‌ಅಂದಾಜಿಸಲಾಗಿದೆ. ಇದರ ಬಗ್ಗೆ ಮಾರ್ಚ 14ರಂದು ಮಸ್ಕಿ‌ ಪಟ್ಟಣಕ್ಕೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಆಗಮಿಸಿದಾಗ ಇದಕ್ಕೆ ಸ್ಪಂದಿಸಿ ಯೋಜನೆಯ ಡಿಪಿಆರ್ ಸೇರಿದಂತೆ ಇನ್ನಿತರ ಕಾಮಗಾರಿ ಆರಂಭಿಸಲು ಭರವಸೆ ನೀಡಿದ್ದರು. ಈ ಕೂಡಲೇ ಸರಕಾರ ಸಂಪುಟ ಸಭೆ ಕರೆದು ಈ ಯೋಜನೆಯನ್ನು ಮಂಜೂರಾತಿ ಮಾಡಬೇಕು ಇಲ್ಲದೇ‌ ಹೋದರೆ ಮುಂದಿನ ದಿನಗಳಲ್ಲಿ ಈ ಭಾಗದ ‌ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎನ್ಆರ್ಬಿಸಿ 5ಎ ಕೆನಾಲ್ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರವಾಪೂರ, ಅಯ್ಯನಗೌಡ ನಾಗರಬೆಂಚಿ, ನಾಗರೆಡ್ಡಪ್ಪ ದೇವರಮನಿ, ತಿಮ್ಮನಗೌಡ ಚಿಲ್ಕರಾಗಿ, ಮಲ್ಲಿಕಾರ್ಜುನ ಹೂವಿನಬಾವಿ, ಮಲ್ಲರೆಡ್ಡಪ್ಪ ಚಿಲ್ಕರಾಗಿ, ಅಜಯ ನಾಡಗೌಡ, ದೇವೇಂದ್ರಪ್ಪ ಕನಸಾಲಿ, ಗಂಗಪ್ಪ ಅಮಜಿನಗಡ, ಇನ್ನಿತರ ಇದ್ದರು.

Leave a Reply

Your email address will not be published. Required fields are marked *

You May Also Like

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ