ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯಿಸಿ ಮಸ್ಕಿ ತಾಲೂಕಿನ ಎನ್ಆರ್ ಬಿ ಸಿ ಕೆನಾಲ್ ಹೋರಾಟ ಸಮಿತಿ ಮುಖಂಡರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ ಫಲವಾಗಿ ಈ ಯೋಜನೆಯ ಡಿಪಿಆರ್ ವನ್ನು ಕೃಷ್ಣಭಾಗ್ಯ ಜಲ ನಿಗಮದ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಸರಕಾರ ಈ ಯೋಜನೆಗೆ ಮಂಜೂರಾತಿ ನೀಡಿಲ್ಲ. ಈ ಯೋಜನೆ ಜಾರಿಯಾದರೆ ರಾಯಚೂರು, ಕೊಪ್ಪಳ ಜಿಲ್ಲೆಗಳ 7 ಗ್ರಾಮಗಳ 72000 ಹೆಕ್ಟೇರ್ ಪ್ರದೇಶ ನೀರಾವರಿ ಪ್ರದೇಶ ಆಗಲಿದೆ. ಯೋಜನೆ ಮೊತ್ತ 2,755 ಕೋಟಿ ರೂ.‌ಅಂದಾಜಿಸಲಾಗಿದೆ. ಇದರ ಬಗ್ಗೆ ಮಾರ್ಚ 14ರಂದು ಮಸ್ಕಿ‌ ಪಟ್ಟಣಕ್ಕೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಆಗಮಿಸಿದಾಗ ಇದಕ್ಕೆ ಸ್ಪಂದಿಸಿ ಯೋಜನೆಯ ಡಿಪಿಆರ್ ಸೇರಿದಂತೆ ಇನ್ನಿತರ ಕಾಮಗಾರಿ ಆರಂಭಿಸಲು ಭರವಸೆ ನೀಡಿದ್ದರು. ಈ ಕೂಡಲೇ ಸರಕಾರ ಸಂಪುಟ ಸಭೆ ಕರೆದು ಈ ಯೋಜನೆಯನ್ನು ಮಂಜೂರಾತಿ ಮಾಡಬೇಕು ಇಲ್ಲದೇ‌ ಹೋದರೆ ಮುಂದಿನ ದಿನಗಳಲ್ಲಿ ಈ ಭಾಗದ ‌ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎನ್ಆರ್ಬಿಸಿ 5ಎ ಕೆನಾಲ್ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರವಾಪೂರ, ಅಯ್ಯನಗೌಡ ನಾಗರಬೆಂಚಿ, ನಾಗರೆಡ್ಡಪ್ಪ ದೇವರಮನಿ, ತಿಮ್ಮನಗೌಡ ಚಿಲ್ಕರಾಗಿ, ಮಲ್ಲಿಕಾರ್ಜುನ ಹೂವಿನಬಾವಿ, ಮಲ್ಲರೆಡ್ಡಪ್ಪ ಚಿಲ್ಕರಾಗಿ, ಅಜಯ ನಾಡಗೌಡ, ದೇವೇಂದ್ರಪ್ಪ ಕನಸಾಲಿ, ಗಂಗಪ್ಪ ಅಮಜಿನಗಡ, ಇನ್ನಿತರ ಇದ್ದರು.

Leave a Reply

Your email address will not be published. Required fields are marked *

You May Also Like

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ಗಾಳಿ, ಗುಡುಗು ಸಹಿತ ಭಾರಿಮಳೆ

ಜೋರಾದ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿತು.