ದೆಹಲಿ: ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡು ಜನರನ್ನು ಬಾಧಿಸುತ್ತಿರುವ ಕೊರೊನಾಗೆ ಗ್ಲೆನ್ ಮಾರ್ಕ್ ಸಂಸ್ಥೆ ಫ್ಯಾಬಿಫ್ಲೂ ಎಂಬ ಔಷಧಿಯನ್ನು ಪರಿಚಯಿಸಿದೆ.
ಕೊರೊನಾವನ್ನು ಹಿಮ್ಮೆಟ್ಟಿಸಲು ಜಾಗತಿಕ ಮಟ್ಟದಲ್ಲಿ ಅನೇಕ ಪ್ರಯತ್ನಗಳು ನಡೆದಿವೆ. ಇವುಗಳ ಪೈಕಿ ಭಾರತದಲ್ಲಿ ಉತ್ಪಾದನೆಯಾಗುವ ಹೈಡ್ರೋಕ್ಸಿಕ್ಲೋರಿಕ್ವಿನ್ ಕೊರೋನಾ ವೈರಸ್ ಚಿಕಿತ್ಸೆಗೆ ತುರ್ತಾಗಿ ಪರಿಣಾಮಕಾರಿ ಎನ್ನಲಾಗಿತ್ತು. ಆದರೆ, ಇದರಿಂದ ಯಾವುದೇ ಉಪಯುಕ್ತತೆ ಇಲ್ಲ ಎಂದು ವರದಿಯಾಯಿತು.
ಇವೆಲ್ಲ ಬೆಳವಣಿಗೆಗಳ ನಡುವೆ ಮುಂಬೈ ಮೂಲದ ಗ್ಲೆನ್ ಮಾರ್ಕ್ ಫಾರ್ಮಾಸುಟಿಕಲ್ಸ್ ಕೇಂದ್ರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದಿಂದ ಫ್ಯಾಬಿಫ್ಲೂ ಉತ್ಪನ್ನಗಳನ್ನು ಉತ್ಪಾದಿಸಲು ಅನುಮತಿ ಪಡೆದಿದೆ.
ಈ ಫಾವಿಪಿರವಿರ್ (favipiravir) ಲಸಿಕೆ ಉತ್ಪಾದನೆಗೆ ಹಸಿರು ನಿಶಾನೆ ಸಿಕ್ಕಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿಯ ಎಂಡಿ ಗ್ಲೆನ್ ಸಲ್ಡಾನಾ, ದೇಶಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ತೀವ್ರ ಒತ್ತಡವಿದೆ ಎಂದಿದ್ದಾರೆ.
ಇನ್ನು ರಷ್ಯಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷದ ದಾಟಿದ ತಕ್ಷಣ favipiravir ಔಷಧಿ ಪ್ರಯೋಗಿಸಲು ಅವಕಾಶ ನೀಡಲಾಗಿತ್ತು. ಇದೀಗ ಭಾರತದಲ್ಲಿ 12,000 ಜನ ಕೊರೊನಾಗೆ ಬಲಿಯಾಗಿದ್ದಾರೆ. ರಷ್ಯಾ ಮಾದರಿಯಲ್ಲೇ ಭಾರತದಲ್ಲೂ favipiravir ಅನ್ನು ಗ್ಲೆನ್ ಮಾರ್ಕ್ ಸಂಸ್ಥೆಯಿಂದ FabiFlu ಹೆಸರಿನಲ್ಲಿ ಮಾರುಕಟ್ಟೆಗೆ ಪರಿಚಯವಾಗಲಿದೆ.
ಭವಿಷ್ಯದಲ್ಲಿ ಇದು ಎಷ್ಟು ಪರಿಣಾಮಕಾರಿಯಾಗಲಿದೆ ಎಂಬುದರ ಆಧಾರದಲ್ಲಿ ದೇಶದಲ್ಲಿ ಕೊರೊನ ನಿಯಂತ್ರಣ ಮತ್ತು ಸ್ಥಗಿತವಾಗಿರುವ ಆರ್ಥಿಕತೆಗೆ ವೇಗ ದಕ್ಕಲಿದೆ.

Leave a Reply

Your email address will not be published. Required fields are marked *

You May Also Like

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…

ಉಡುಪಿಯಲ್ಲಿ ಸೈನಿಕ – ಪೊಲೀಸ್ ಮದ್ಯೆ ಜಟಾಪಟಿ

ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಕೇಂದ್ರ ವಿಧಿಸಿದ 4 ನೇ ಹಂತದ ಲಾಕ್ ಡೌನ್ ನಿಯಮಗಳೇನು?

ಇಂದಿನಿಂದಲೆ ಕೆಲವು ನಿಯಮಗಳನ್ನು ಅಳವಡಿಸಿ ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಡ್ ಡೌನ್ ಜಾರಿ ಮಾಡಿ ಆದೇಶಿಸಿದೆ. ಮೇ 31ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ಅಂತಾ ನೋಡಿ