ದೆಹಲಿ: ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡು ಜನರನ್ನು ಬಾಧಿಸುತ್ತಿರುವ ಕೊರೊನಾಗೆ ಗ್ಲೆನ್ ಮಾರ್ಕ್ ಸಂಸ್ಥೆ ಫ್ಯಾಬಿಫ್ಲೂ ಎಂಬ ಔಷಧಿಯನ್ನು ಪರಿಚಯಿಸಿದೆ.
ಕೊರೊನಾವನ್ನು ಹಿಮ್ಮೆಟ್ಟಿಸಲು ಜಾಗತಿಕ ಮಟ್ಟದಲ್ಲಿ ಅನೇಕ ಪ್ರಯತ್ನಗಳು ನಡೆದಿವೆ. ಇವುಗಳ ಪೈಕಿ ಭಾರತದಲ್ಲಿ ಉತ್ಪಾದನೆಯಾಗುವ ಹೈಡ್ರೋಕ್ಸಿಕ್ಲೋರಿಕ್ವಿನ್ ಕೊರೋನಾ ವೈರಸ್ ಚಿಕಿತ್ಸೆಗೆ ತುರ್ತಾಗಿ ಪರಿಣಾಮಕಾರಿ ಎನ್ನಲಾಗಿತ್ತು. ಆದರೆ, ಇದರಿಂದ ಯಾವುದೇ ಉಪಯುಕ್ತತೆ ಇಲ್ಲ ಎಂದು ವರದಿಯಾಯಿತು.
ಇವೆಲ್ಲ ಬೆಳವಣಿಗೆಗಳ ನಡುವೆ ಮುಂಬೈ ಮೂಲದ ಗ್ಲೆನ್ ಮಾರ್ಕ್ ಫಾರ್ಮಾಸುಟಿಕಲ್ಸ್ ಕೇಂದ್ರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದಿಂದ ಫ್ಯಾಬಿಫ್ಲೂ ಉತ್ಪನ್ನಗಳನ್ನು ಉತ್ಪಾದಿಸಲು ಅನುಮತಿ ಪಡೆದಿದೆ.
ಈ ಫಾವಿಪಿರವಿರ್ (favipiravir) ಲಸಿಕೆ ಉತ್ಪಾದನೆಗೆ ಹಸಿರು ನಿಶಾನೆ ಸಿಕ್ಕಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿಯ ಎಂಡಿ ಗ್ಲೆನ್ ಸಲ್ಡಾನಾ, ದೇಶಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ತೀವ್ರ ಒತ್ತಡವಿದೆ ಎಂದಿದ್ದಾರೆ.
ಇನ್ನು ರಷ್ಯಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷದ ದಾಟಿದ ತಕ್ಷಣ favipiravir ಔಷಧಿ ಪ್ರಯೋಗಿಸಲು ಅವಕಾಶ ನೀಡಲಾಗಿತ್ತು. ಇದೀಗ ಭಾರತದಲ್ಲಿ 12,000 ಜನ ಕೊರೊನಾಗೆ ಬಲಿಯಾಗಿದ್ದಾರೆ. ರಷ್ಯಾ ಮಾದರಿಯಲ್ಲೇ ಭಾರತದಲ್ಲೂ favipiravir ಅನ್ನು ಗ್ಲೆನ್ ಮಾರ್ಕ್ ಸಂಸ್ಥೆಯಿಂದ FabiFlu ಹೆಸರಿನಲ್ಲಿ ಮಾರುಕಟ್ಟೆಗೆ ಪರಿಚಯವಾಗಲಿದೆ.
ಭವಿಷ್ಯದಲ್ಲಿ ಇದು ಎಷ್ಟು ಪರಿಣಾಮಕಾರಿಯಾಗಲಿದೆ ಎಂಬುದರ ಆಧಾರದಲ್ಲಿ ದೇಶದಲ್ಲಿ ಕೊರೊನ ನಿಯಂತ್ರಣ ಮತ್ತು ಸ್ಥಗಿತವಾಗಿರುವ ಆರ್ಥಿಕತೆಗೆ ವೇಗ ದಕ್ಕಲಿದೆ.

Leave a Reply

Your email address will not be published. Required fields are marked *

You May Also Like

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.

ವಿಶ್ವ ಸಂಸ್ಥೆ ಭದ್ರತಾ ಸಮಿತಿಗೆ ಭಾರತ ತಾತ್ಕಾಲಿಕ‌ ಸದಸ್ಯ

ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ…

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.