ಹಾವೇರಿ: ಯಡಿಯೂರಪ್ಪ ದಮ್ ನಿಂದಲೇ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಿರೋದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಹಾವೇರಿಯಲ್ಲಿ ಹೇಳಿಕೆ ನೀಡಿದ ಅವರು, ಕೇಂದ್ರದಿಂದ ಹಣ ತರುವ ದಮ್ ಯಡಿಯೂರಪ್ಪಗೆ ಇಲ್ಲಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಅವರು, ಯಡಿಯೂರಪ್ಪ ದಮ್ ಏನು ಅನ್ನೋದು ಗೊತ್ತಾಗಿದೆ. ಅವರ ದಮ್ ನಿಂದಲೇ 17 ಶಾಸಕರು ಬಂದಿದ್ದು. 12 ಜನ ಗೆದ್ದಿದ್ದು, 10 ಜನ ಮಂತ್ರಿಯಾಗಿದ್ದು, ಇಬ್ಬರು ಎಂಲ್ ಸಿ ಆಗಿದ್ದು ಎಂದರು.
ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿಕೆ ಕುರಿತು ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಈಶ್ವರ ಖಂಡ್ರೆ ಭ್ರಮೆಯದು. ಅವರು ಏನೋ ಕಲ್ಪನಾ ಕಥೆಗಳನ್ನು ಕಟ್ಟಿಕೊಳ್ತಿದ್ದಾರೆ. ಅವರು ಸರಿ ಇದ್ದಿದ್ದರೆ ಯಾರು ಹೊರ ಬರುತ್ತಿದ್ದರು ಎಂದು ಪ್ರಶ್ನಿಸಿದರು.
ಮಾಜಿ ಶಾಸಕ ವಿಶ್ವನಾಥ್ ಅವರಿಗೆ ಪರಿಷತ್ ಟಿಕೆಟ್ ಕೈ ತಪ್ಪಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಅವರಿಗೆ ಟಿಕೆಟ್ ಕೊಡಬೇಕಾಗಿತ್ತು. ಕೊಡುತ್ತಾರೆ ಎಂದುಕೊಂಡಿದ್ದೆವು. ಈಗ ಇಬ್ಬರಿಗೆ ಕೊಟ್ಟಿದ್ದಾರೆ. ಮುಂಬರುವ ದಿನದಲ್ಲಿ ಅವರಿಗೂ ಕೊಡ್ತಾರೆ ಎಂದರು.

1 comment
Leave a Reply

Your email address will not be published. Required fields are marked *

You May Also Like

ಗರ್ಭಿಣಿಯರನ್ನು ಬಿಸಿಲಿನಲ್ಲಿಯೇ ಕಾದು ಕುಳಿತುಕೊಳ್ಳುವಂತೆ ಮಾಡಿದ ಆಸ್ಪತ್ರೆ ಸಿಬ್ಬಂದಿ!

ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.