ಜೀವನದುದ್ದಕ್ಕೂ ತನ್ನ ಗುಡಸಲಿನ
ಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ ತುಂಬಾ ಗುಲಾಲು
ಕೈಯಲ್ಲಿ ಪ್ರಜ್ವಲಿಸುವ ಹಿಲಾಲು
ಮೆರವಣಿಗೆ ಅಡ್ಡ ಪಲ್ಲಕ್ಕಿ
ಶವ ಸಂಸ್ಕಾರಕ್ಕೂ ಹೆಗಲು ಕೊಟ್ಟ ನನ್ನಪ್ಪ
ಕಣ್ಣಲ್ಲಿ ಸೂರ್ಯ ತುಂಬಿ ಕೊಂಡು
ಎದೆಯ ಮೇಲೆ ಬುದ್ಧನನ್ನು
ಮಲಗಿಸಿ ಜೋಗುಳ ಹಾಡುವವ ನನ್ನಪ್ಪ
ಲೆಕ್ಕವಿರದ ನಕ್ಷತ್ರಗಳು ತನ್ನ ಜೋಪಡಿಯಲ್ಲಿ ಇಣುಕಿದರೂ
ಬಡತನವೆಂಬ ಬೇತಾಳನ ಗೆಳೆತನ ಬಿಡದ ನನ್ನಪ್ಪ
ಮೆರವಣಿಗೆಯಲಿ ಹಿಲಾಲು ಹಿಡಿದು
ಹಿಡಿಕಾಳು ತಂದಾನು
ಜೋಪಡಿಯಿಂದ ಪಣತಿ ಬೆಳಗಿಸಿಯಾನು ಅಂದುಕೊಂಡು ಶಬರಿವೃತ ಹಿಡಿದಿದ್ದಳು ನನ್ನವ್ವ
ಮೆರವಣಿಗೆಯಲಿ ತೂರುವ
ಚುರುಮರಿ ಕೋಳಿ ಮರಿಗಳಂತೆ ಆರಿಸುವ ಮಕ್ಕಳು
ಧರ್ಮದ ಅಮಲಿನಲ್ಲ
ಜೈಕಾರ ಹಾಕುತ ರಕ್ತ ಹರಿಸಿದವರೆಷ್ಟೋ
ರಕ್ತದ ರಂಗೋಲಿ ಚಿತ್ತಾರವ ಕಂಡು
ಖುಷಿ ಪಟ್ಟವರೆಷ್ಟೋ?
ಎಣಿಕೆಗೆ ಸಿಗುತ್ತಿಲ್ಲ !

ಎ ಎಸ್. ಮಕಾನದಾರ. ಗದಗ

1 comment
Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.