ಜೀವನದುದ್ದಕ್ಕೂ ತನ್ನ ಗುಡಸಲಿನ
ಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ ತುಂಬಾ ಗುಲಾಲು
ಕೈಯಲ್ಲಿ ಪ್ರಜ್ವಲಿಸುವ ಹಿಲಾಲು
ಮೆರವಣಿಗೆ ಅಡ್ಡ ಪಲ್ಲಕ್ಕಿ
ಶವ ಸಂಸ್ಕಾರಕ್ಕೂ ಹೆಗಲು ಕೊಟ್ಟ ನನ್ನಪ್ಪ
ಕಣ್ಣಲ್ಲಿ ಸೂರ್ಯ ತುಂಬಿ ಕೊಂಡು
ಎದೆಯ ಮೇಲೆ ಬುದ್ಧನನ್ನು
ಮಲಗಿಸಿ ಜೋಗುಳ ಹಾಡುವವ ನನ್ನಪ್ಪ
ಲೆಕ್ಕವಿರದ ನಕ್ಷತ್ರಗಳು ತನ್ನ ಜೋಪಡಿಯಲ್ಲಿ ಇಣುಕಿದರೂ
ಬಡತನವೆಂಬ ಬೇತಾಳನ ಗೆಳೆತನ ಬಿಡದ ನನ್ನಪ್ಪ
ಮೆರವಣಿಗೆಯಲಿ ಹಿಲಾಲು ಹಿಡಿದು
ಹಿಡಿಕಾಳು ತಂದಾನು
ಜೋಪಡಿಯಿಂದ ಪಣತಿ ಬೆಳಗಿಸಿಯಾನು ಅಂದುಕೊಂಡು ಶಬರಿವೃತ ಹಿಡಿದಿದ್ದಳು ನನ್ನವ್ವ
ಮೆರವಣಿಗೆಯಲಿ ತೂರುವ
ಚುರುಮರಿ ಕೋಳಿ ಮರಿಗಳಂತೆ ಆರಿಸುವ ಮಕ್ಕಳು
ಧರ್ಮದ ಅಮಲಿನಲ್ಲ
ಜೈಕಾರ ಹಾಕುತ ರಕ್ತ ಹರಿಸಿದವರೆಷ್ಟೋ
ರಕ್ತದ ರಂಗೋಲಿ ಚಿತ್ತಾರವ ಕಂಡು
ಖುಷಿ ಪಟ್ಟವರೆಷ್ಟೋ?
ಎಣಿಕೆಗೆ ಸಿಗುತ್ತಿಲ್ಲ !

ಎ ಎಸ್. ಮಕಾನದಾರ. ಗದಗ

1 comment
Leave a Reply

Your email address will not be published. Required fields are marked *

You May Also Like

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಕೊರೋನಾ ಕಾವ್ಯ-5

ಕೊರೋನಾ ಕಾವ್ಯ ಸರಣಿಗೆ ಇಂದು ಕಾವ್ಯ ಕಳುಹಿಸಿದವರು ಗದುಗಿನ ಹಿರಿಯ ಸಾಹಿತಿ ಎ.ಎಸ್.ಮಕಾನದಾರ್ ಅವರು.

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…