ಜೀವನದುದ್ದಕ್ಕೂ ತನ್ನ ಗುಡಸಲಿನ
ಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ ತುಂಬಾ ಗುಲಾಲು
ಕೈಯಲ್ಲಿ ಪ್ರಜ್ವಲಿಸುವ ಹಿಲಾಲು
ಮೆರವಣಿಗೆ ಅಡ್ಡ ಪಲ್ಲಕ್ಕಿ
ಶವ ಸಂಸ್ಕಾರಕ್ಕೂ ಹೆಗಲು ಕೊಟ್ಟ ನನ್ನಪ್ಪ
ಕಣ್ಣಲ್ಲಿ ಸೂರ್ಯ ತುಂಬಿ ಕೊಂಡು
ಎದೆಯ ಮೇಲೆ ಬುದ್ಧನನ್ನು
ಮಲಗಿಸಿ ಜೋಗುಳ ಹಾಡುವವ ನನ್ನಪ್ಪ
ಲೆಕ್ಕವಿರದ ನಕ್ಷತ್ರಗಳು ತನ್ನ ಜೋಪಡಿಯಲ್ಲಿ ಇಣುಕಿದರೂ
ಬಡತನವೆಂಬ ಬೇತಾಳನ ಗೆಳೆತನ ಬಿಡದ ನನ್ನಪ್ಪ
ಮೆರವಣಿಗೆಯಲಿ ಹಿಲಾಲು ಹಿಡಿದು
ಹಿಡಿಕಾಳು ತಂದಾನು
ಜೋಪಡಿಯಿಂದ ಪಣತಿ ಬೆಳಗಿಸಿಯಾನು ಅಂದುಕೊಂಡು ಶಬರಿವೃತ ಹಿಡಿದಿದ್ದಳು ನನ್ನವ್ವ
ಮೆರವಣಿಗೆಯಲಿ ತೂರುವ
ಚುರುಮರಿ ಕೋಳಿ ಮರಿಗಳಂತೆ ಆರಿಸುವ ಮಕ್ಕಳು
ಧರ್ಮದ ಅಮಲಿನಲ್ಲ
ಜೈಕಾರ ಹಾಕುತ ರಕ್ತ ಹರಿಸಿದವರೆಷ್ಟೋ
ರಕ್ತದ ರಂಗೋಲಿ ಚಿತ್ತಾರವ ಕಂಡು
ಖುಷಿ ಪಟ್ಟವರೆಷ್ಟೋ?
ಎಣಿಕೆಗೆ ಸಿಗುತ್ತಿಲ್ಲ !

ಎ ಎಸ್. ಮಕಾನದಾರ. ಗದಗ

1 comment
Leave a Reply

Your email address will not be published. Required fields are marked *

You May Also Like

ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪಗಳಾದರೆ ಸಂಸ್ಥೆಯ ಮುಖ್ಯಸ್ಥರೆ ಹೊಣೆ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ…