ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್ ಎಫ್) ಮುಂಬಯಿ ಪೊಲೀಸರಿಗೆ ಸಲ್ಲಿಸಿದೆ.

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ಭಾನುವಾರ ಬಾಂದ್ರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ಯಾವುದೇ ಪತ್ರ ದೊರೆತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಬಳಿಕ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು, ಸಿನಿಮಾ ಒಪ್ಪಂದದ ಕುರಿತು ಮಾಹಿತಿ ಹಂಚಿಕೊಳ್ಳುವಂತೆ ಯಶ್ ರಾಜ್ ಫಿಲ್ಮ್ಸ್ ಗೆ ಜೂ.18 ರಂದು ಸೂಚನೆ ನೀಡಿದ್ದರು. ಹೀಗಾಗಿ ಯಶ್ ರಾಜ್ ಫಿಲ್ಸ್ಮ್ ಪ್ರತಿಗಳನ್ನು ನೀಡಿದೆ.

ಸುಶಾಂತ್ ಸಿಂಗ್ ರಜಪೂತ್ ಸಹಿ ಮಾಡಿರುವ ಒಪ್ಪಂದದ ಪತ್ರ ವೈಆರ್ ಎಫ್ ನಿಂದ ಲಭ್ಯವಾಗಿದೆ ಎಂದು ಅಭಿಷೇಕ್ ತ್ರಿಮುಖೆ, ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಝೋನ್-IX ಹೇಳಿದ್ದಾರೆ. ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು, ಸುಶಾಂತ್ ಕುಟುಂಬ ಸದಸ್ಯರು, ಸುಶಾಂತ್ ನ ಆಪ್ತ ಗೆಳತಿ ರೆಹಾ ಚಕ್ರವರ್ತಿ, ಕಾಸ್ಟಿಂಗ್ ಡೈರೆಕ್ಟರ್ ಮುಖೇಶ್ ಛಬ್ರಾ ಸೇರಿದಂತೆ 15 ಜನರನ್ನು ವಿಚಾರಣೆಗೊಳಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

‘ಪುಷ್ಪ’ ಜಾತಿ ಬಿರುಗಾಳಿಯಲ್ಲಿ

ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ…

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಕೋವಿಡ್-19 ಗದಗ ಜಿಲ್ಲೆ : ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬ0ದ ಪ್ರದೇಶಗಳನ್ನು ಪ್ರತಿಬಂಧಿತÀ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ.

ಕಾರ್ಮಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸುತ್ತಿರುವ ರೈಲ್ವೆ ಇಲಾಖೆ!

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.