ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ ಕಣ್ಣಿಗೆ ಇದು ಕಾಣುತ್ತಿಲ್ಲ. 12 ವರ್ಷಗಳಿಂದ ದುರಸ್ತಿ ಹಾಗೂ ಅಭಿವೃದ್ಧಿ ನೆಪದಲ್ಲಿ ಬಿಲ್ ಮಾತ್ರ ಎತ್ತಲಾಗುತ್ತಿದೆ ಎನ್ನುವ ಆರೋಪವೂ ಕೇಳಿ ಬಂದಿದೆ. ಆದರೆ ಉದ್ಯಾನವನ ಮಾತ್ರ ಅಭಿವೃದ್ಧಿಯಾಗಿಲ್ಲ.
ಇದು ಐತಿಹಾಸಿಕ ಭೂಥನಾತೇಶ್ವರ ದೇವಾಲಯದ ಹಾಗೂ ಐತಿಹಾಸಿಕ ಹಿರೇಕೆರೆ ದಂಡೆಯ ಮೇಲಿನ ಉದ್ಯಾನವನ.

ಸಮೀಪದಲ್ಲಿರುವ ಕೆರೆಯಲ್ಲಿ ನೀರು ಇದ್ದರು ಸಹ ದಂಡೆಯ ಮೇಲೆ ಗಿಡಗಳನ್ನು ಬೆಳಸಲಾಗಿಲ್ಲ.

ಸಾರ್ವಜನಿಕರ ಜನ ಹಣ ದುರಸ್ಥಿ ನೆಪದಲ್ಲಿ ಹಾಳಾಗಿದೆ. ಉದ್ಯಾನವನ ಅಭಿವೃದ್ಧಿಗೆ ಪಟ್ಟಣ ಪಂಚಾಯತಿ ಮುಂದಾಗಬೇಕಿದೆ. ಅಶೋಕ ಬೇವಿನಕಟ್ಟಿ, ಕಾಂಗ್ರೆಸ್ ಮುಖಂಡ ನರೆಗಲ್ಲ.

ದುರಸ್ತಿ ನೆಪದಲ್ಲಿ ಖರ್ಚು ಮಾಡಿದ ಲಕ್ಷಾಂತರ ರೂಪಾಯಿ ಪ್ರಯೋಜನಕ್ಕೆ ಬಾರದಂತಾಗಿದೆ.

ಇನ್ನಾದ್ರೂ ಪಟ್ಟಣ ಪಂಚಾಯತಿ ಈ ಬಗ್ಗೆ ಕಾಳಜಿ ವಹಿಸಿ ಉದ್ಯಾನವನ ಅಭಿವೃದ್ಧಿಗೆ ಮುಂದಾಗಬೇಕಿದೆ. ಈ ಮೂಲಕ ಪಟ್ಟಣ ಪಂಚಾಯತಿ ಪಕ್ಕದ ವಾತಾವರಣ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ಶ್ರಮಿಸಬೇಕಿದೆ.

2 comments
  1. ಮುಂದಿನ ದಿನಮಾನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ನಮಗೆ ಅಧಿಕಾರ ಸಿಗುವುದನ್ನು ಕಾಯುತ್ತಿದ್ದೆವೆ ಇಂತಹ ಹಲವಾರು ಸಮಸ್ಯೆಗಳ ಪಟ್ಟಿ ಮಾಡಿಕೊಂಡಿದ್ದೆವೆ ಅವೆಲ್ಲವುಗಳನ್ನು ಕಾರ್ಯ ರೊಪ್ಪಕ್ಕೆ ತರುವ ಪ್ರಯತ್ನ ಮಾಡುತ್ತೆವೆ.

Leave a Reply

Your email address will not be published. Required fields are marked *

You May Also Like

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಗದಗ ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116…

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಕೊರೊನಾ ಮಾರ್ಗಸೂಚಿ ಪಾಲಿಸಲು ಕೇಂದ್ರದಿಂದ ರಾಜ್ಯಗಳಿಗೆ ತಾಕೀತು!

ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.