ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿ ಪೋಷಕ, ಪೋಷಕರು ಅಥವಾ ಜತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೊನಾ ಹಿನ್ನೆಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು  ಪೂರ್ವಭಾವಿಯಾಗಿ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ನಡೆದ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಕಂಟೈನ್ಮೆಂಟ್‌ ವಲಯದಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ದಾಖಲೆಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಜಿಲ್ಲಾ ಉಪನಿರ್ದೇಶರು ಅನ್ಯ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪರಿಶೀಲಿಸುವ ಕಾರ್ಯ ಆರಂಭವಾಗಿದೆ.

ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಿ ಕಾಯ್ದಿರಿಸಿದ್ದೇವೆ. ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಅತ್ಯಂತ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿವೆ. ಅಲ್ಲದೇ, ಈ ಬಾರಿ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ವಲಸೆ ಕಾರ್ಮಿಕರನ್ನು ಕಳುಹಿಸಿಕೊಡುವ ಜವಾಬ್ದಾರಿ ನಮ್ಮದು: ಸುಧಾಕರ್

ಅಧಿಕೃತ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅರಮನೆ ಮೈದಾನದಲ್ಲಿ ಜನದಟ್ಟಣೆ ಗಮನಿಸಿ, ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿ, ಜನರಿಗೆ ವೈದ್ಯಕೀಯ ಶಿಕ್ಷಣ ಸಚಿವರು ಸಮಾಧಾನ ಹೇಳಿದ ಘಟನೆ ನಡೆಯಿತು.

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…

ಕೊರೊನಾ ಭಯ : ಇಂದು ವಿಕಾಸಸೌಧಕ್ಕೆ ರಜೆ!

ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ…