ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಮಂದಿ ವೈದ್ಯರು ಮತ್ತು ಏಳು ಮಂದಿ ತರಬೇತಿ ಪಡೆಯುತ್ತಿದ್ದ ವೈದ್ಯರು ಸೋಂಕಿಗೆ ಗುರಿಯಾಗಿದ್ದಾರೆ. ಆಸ್ಪತ್ರೆಯಲ್ಲಿ ಮೂರನೇ ಮತ್ತು ನಾಲ್ಕನೇ ಶ್ರೇಣಿಯ ನೌಕರರು ಮತ್ತು ದಾದಿಯರ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೂ ಹೆಚ್ಚಾಗಿದೆ. ಆಸ್ಪತ್ರೆಯ ಸೋಂಕಿತ 60 ಜನ ವೈದ್ಯರು ಚೇತರಿಸಿಕೊಂಡಿದ್ದಾರೆ. ಅಲ್ಲದೇ, ಕೇವಲ 30 ಜನ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದ್ದಾರೆ.

ನಾಯರ್‌ ಆಸ್ಪತ್ರೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದರೂ, ರೋಗಿಗಳ ಬೆಳವಣಿಗೆಯ ಒತ್ತಡ ಕಡಿಮೆ ಮಾಡಲು ರೋಗಿಗಳನ್ನು ತಿಲಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾವಿಯಲ್ಲಿ ಈಗ ರೋಗಿಗಳ ಸಂಖ್ಯೆ ನಿಯಂತ್ರಣದಲ್ಲಿದ್ದರೂ, ಇತರ ಸ್ಥಳಗಳಿಂದ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಆನ್ಲೈನ್ ಸಹಾಯದಿಂದ ಯುವಕರಲ್ಲಿ ಜಾನಪದ ಆಸಕ್ತಿ ಮೂಡಿಸುತ್ತಿರುವ ಡಾ.ಬಾಲಾಜಿ

ಕನ್ನಡ ಜಾನಪದ ಯುವ ಬ್ರಿಗೇಡಿನ ಮೂಲಕ ಯುವ ಜನಾಂಗವನ್ನು ಎಚ್ಚರಿಸುವ ಹಾಗೂ ಅವರನ್ನು ಜಾನಪದ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ಆಪ್ ಸಹಾಯದಿಂದ ಯುವಕರನ್ನು ಸೇರಿಸಿ ಅವರಿಗೆ ಜಾನಪದ ಕಲೆಯ ಸೊಗಡು ಉಣ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.