ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಮಂದಿ ವೈದ್ಯರು ಮತ್ತು ಏಳು ಮಂದಿ ತರಬೇತಿ ಪಡೆಯುತ್ತಿದ್ದ ವೈದ್ಯರು ಸೋಂಕಿಗೆ ಗುರಿಯಾಗಿದ್ದಾರೆ. ಆಸ್ಪತ್ರೆಯಲ್ಲಿ ಮೂರನೇ ಮತ್ತು ನಾಲ್ಕನೇ ಶ್ರೇಣಿಯ ನೌಕರರು ಮತ್ತು ದಾದಿಯರ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೂ ಹೆಚ್ಚಾಗಿದೆ. ಆಸ್ಪತ್ರೆಯ ಸೋಂಕಿತ 60 ಜನ ವೈದ್ಯರು ಚೇತರಿಸಿಕೊಂಡಿದ್ದಾರೆ. ಅಲ್ಲದೇ, ಕೇವಲ 30 ಜನ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದ್ದಾರೆ.

ನಾಯರ್‌ ಆಸ್ಪತ್ರೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದರೂ, ರೋಗಿಗಳ ಬೆಳವಣಿಗೆಯ ಒತ್ತಡ ಕಡಿಮೆ ಮಾಡಲು ರೋಗಿಗಳನ್ನು ತಿಲಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾವಿಯಲ್ಲಿ ಈಗ ರೋಗಿಗಳ ಸಂಖ್ಯೆ ನಿಯಂತ್ರಣದಲ್ಲಿದ್ದರೂ, ಇತರ ಸ್ಥಳಗಳಿಂದ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಚೆಲ್ಲುಭತ್ತ ನಿಧಾನಕ್ಕೆ ಕಾಲೂರಿದೆ

ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ.

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ