ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೇ, ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ತೆಲಂಗಾಣ, ತಮಿಳುನಾಡು ರಾಜ್ಯಗಳು ಪರೀಕ್ಷೆಯನ್ನು ರದ್ದುಗೊಳಿಸಿದ್ದವು, ಸದ್ಯ ಆಂಧ್ರಪ್ರದೇಶ ರಾಜ್ಯವೂ ಇದೇ ನಿರ್ಧಾರ ಕೈಗೊಂಡಿದೆ.

ಆದರೆ, ಕರ್ನಾಟಕ ರಾಜ್ಯದಲ್ಲಿ ಮಾತ್ರ ಪರೀಕ್ಷೆಗಳು ನಡೆಯುತ್ತಿವೆ. ಜೂ. 25ರಂದು ಸುರಕ್ಷಿತವಾಗಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಆಂಧ್ರ ಪ್ರದೇಶದಲ್ಲಿ ಇಲ್ಲಿಯವರೆಗೂ ಒಟ್ಟು 7961 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, 96 ಜನ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಹಾರ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಆರ್ ಜೆಡಿ!

ಪಾಟ್ನಾ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಬರೋಬ್ಬರಿ 11 ಗಂಟೆಗಳ ಕಾಲ ಮಾತುಕತೆ ನಡೆಸಿದ ಭಾರತ, ಚೀನಾ ಸೇನಾಧಿಕಾರಿಗಳು!

ಲಡಾಖ್: ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಗಡಿ ಸಂಘರ್ಷದ ಕುರಿತು…

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…

ಒಂದೆ ಬೀದಿಯಲ್ಲಿ 42 ಕೊರೋನಾ ಪಾಸಿಟಿವ್

ಇಲ್ಲಿಯ ಬೀದಿಯೊಂದರಲ್ಲಿಯೇ ದಾಖಲೆಯ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಟಿ, ಕಾಫಿ ಮತ್ತಿತರ ಸ್ನ್ಯಾಕ್ಸ್ ವಿತರಿಸುತ್ತಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಇಡೀ ಬೀದಿಗೆ ಅಂಟಿಕೊಂಡಿದೆ.