ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.
ಮುಜರಾಯಿ ಇಲಾಖೆ ನಡೆಸುವ ಈ ಕಾರ್ಯಕ್ರಮಕ್ಕೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಇರುವ ಬೇರೆ ಬೇರೆ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಸಲು ಸರ್ಕಾರ ಸಮಯ ನಿಗದಿ ಮಾಡಿತ್ತು.
ಇದಕ್ಕಾಗಿ ಮಾರ್ಚ್ ನಲ್ಲಿ ನೋಂದಾಯಿಸಿದ್ದ ವಧು – ವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಸಮ್ಮತಿ ಪತ್ರ ಪಡೆದು ನಿಗದಿತ ದಿನಾಂಕದಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿಯೇ ಎ ದರ್ಜೆಯ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾದಿಂದ ಮುಂದೂಡಲಾಗಿತ್ತು. ಸದ್ಯ ಮತ್ತೆ ಈ ಸಮಯವನ್ನು ಮುಂದೂಡಲಾಗಿದೆ.

Leave a Reply

Your email address will not be published. Required fields are marked *

You May Also Like

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…

ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ

ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…

ಇನ್ನು ಕೆಲವೇ ದಿನಗಳಲ್ಲಿ ಹೊಸ ಮರಳು ನೀತಿ ಅನ್ವಯ ಕಾರ್ಯಾರಂಭ: ಸಿ.ಸಿ.ಪಾಟೀಲ್

ಇನ್ನು ಕೆಲವೇ‌ ದಿನಗಳಲ್ಲಿ ನೂತನ ಮರಳು‌ ನೀತಿ‌ ಪ್ರಾರಂಭಿಸಲಿದ್ದೇವೆ. ಜೊತೆಗೆ ಎಂಎಂಐಎಲ್ ಹಾಗೂ ಹಟ್ಟಿ ಚಿನ್ನದ ಗಣಿ ಎಜಿನ್ಸಿಗಳಿಗೆ ನೂತನ ಮರಳು ನೀತಿ‌ ಅನ್ವಯ ಮರಳು ತೆಗೆಯಲು ಈ ಎರೆಡು ಎಜಿನ್ಸಿಗಳಿಗೆ ಆದೇಶ‌ ನೀಡಲಾಗಿದೆ.