ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.
ಮುಜರಾಯಿ ಇಲಾಖೆ ನಡೆಸುವ ಈ ಕಾರ್ಯಕ್ರಮಕ್ಕೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಇರುವ ಬೇರೆ ಬೇರೆ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಸಲು ಸರ್ಕಾರ ಸಮಯ ನಿಗದಿ ಮಾಡಿತ್ತು.
ಇದಕ್ಕಾಗಿ ಮಾರ್ಚ್ ನಲ್ಲಿ ನೋಂದಾಯಿಸಿದ್ದ ವಧು – ವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಸಮ್ಮತಿ ಪತ್ರ ಪಡೆದು ನಿಗದಿತ ದಿನಾಂಕದಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿಯೇ ಎ ದರ್ಜೆಯ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾದಿಂದ ಮುಂದೂಡಲಾಗಿತ್ತು. ಸದ್ಯ ಮತ್ತೆ ಈ ಸಮಯವನ್ನು ಮುಂದೂಡಲಾಗಿದೆ.

Leave a Reply

Your email address will not be published. Required fields are marked *

You May Also Like

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ…