ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.
ಮುಜರಾಯಿ ಇಲಾಖೆ ನಡೆಸುವ ಈ ಕಾರ್ಯಕ್ರಮಕ್ಕೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಇರುವ ಬೇರೆ ಬೇರೆ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಸಲು ಸರ್ಕಾರ ಸಮಯ ನಿಗದಿ ಮಾಡಿತ್ತು.
ಇದಕ್ಕಾಗಿ ಮಾರ್ಚ್ ನಲ್ಲಿ ನೋಂದಾಯಿಸಿದ್ದ ವಧು – ವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಸಮ್ಮತಿ ಪತ್ರ ಪಡೆದು ನಿಗದಿತ ದಿನಾಂಕದಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿಯೇ ಎ ದರ್ಜೆಯ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾದಿಂದ ಮುಂದೂಡಲಾಗಿತ್ತು. ಸದ್ಯ ಮತ್ತೆ ಈ ಸಮಯವನ್ನು ಮುಂದೂಡಲಾಗಿದೆ.

Leave a Reply

Your email address will not be published. Required fields are marked *

You May Also Like

ಮನೆಗೆ ಕನ್ನ : ಲಕ್ಷಾಂತರ ನಗದು ದೋಚಿ ಪರಾರಿಯಾದ ಕಳ್ಳರು

ಮುಳಗುಂದ: ರೈತ ಸೋಮಣ್ಣ ಸುಂಕದ ಅವರ ಮನೆಯ ಬಾಗಿಲ ಲಾಕ್ ಮುರಿದು ಒಳ ನುಗ್ಗಿದ್ದ ಕಳ್ಳರು…

ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ…

ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…