ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.
ಮುಜರಾಯಿ ಇಲಾಖೆ ನಡೆಸುವ ಈ ಕಾರ್ಯಕ್ರಮಕ್ಕೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಇರುವ ಬೇರೆ ಬೇರೆ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಸಲು ಸರ್ಕಾರ ಸಮಯ ನಿಗದಿ ಮಾಡಿತ್ತು.
ಇದಕ್ಕಾಗಿ ಮಾರ್ಚ್ ನಲ್ಲಿ ನೋಂದಾಯಿಸಿದ್ದ ವಧು – ವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಸಮ್ಮತಿ ಪತ್ರ ಪಡೆದು ನಿಗದಿತ ದಿನಾಂಕದಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿಯೇ ಎ ದರ್ಜೆಯ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾದಿಂದ ಮುಂದೂಡಲಾಗಿತ್ತು. ಸದ್ಯ ಮತ್ತೆ ಈ ಸಮಯವನ್ನು ಮುಂದೂಡಲಾಗಿದೆ.

Leave a Reply

Your email address will not be published. Required fields are marked *

You May Also Like

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ರಾಜ್ಯ ಕ.ಸಾ.ಪ ಕಾರ್ಯಕಾರಿ ಸಮಿತಿಗೆ ನೇಮಕ.

ಬೆಂಗಳೂರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಕನ್ನಡ ಭಾಷೆ,…

ಒಂದೇ ದಿನದಲ್ಲಿ 10,956 ಕೊರೊನಾ ಪಾಸಿಟಿವ್: 4ನೇ ಸ್ಥಾನಕ್ಕೇರಿದ ಭಾರತ!

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,956 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ…