ರಾಯಚೂರು: ನನ್ನ ದೇಶದ ಸೈನಿಕರು ಸತ್ತಾಗಿನಿಂದ ನನಗೆ ನಿದ್ದೆ ಬರುತ್ತಿಲ್ಲ ಚೀನಾ ದೇಶದ ವಿರುದ್ಧ ಸೇಡು ತೀರಿಸಿಕೊಳ್ಳಲು ಗಡಿಯಲ್ಲಿ ಸೇವೆ ಸಲ್ಲಿಸಲು ನನಗೊಂದು ಅವಕಾಶ ಕಲ್ಪಿಸಿಕೊಡಿ ಎಂದು ಇಲ್ಲೊಬ್ಬ ಹೊಮ್ ಗಾರ್ಡ ರಕ್ತದಲ್ಲಿ ಪತ್ರ ಬರೆದು ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಕರ್ನಾಟಕ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಣ ಮಡಿವಾಳ ಅವರು ಬಿ.ಎ ಬಿ.ಇಡಿ ಶಿಕ್ಷಣ ಮುಗಿಸಿ ಹೋಮ್ ಗಾಡ್ ಆಗಿ ಹಾಗೂ ಭಗತ್ ಸಿಂಗ್ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದೇಶ ಸೇವೆ ಸಲ್ಲಿಸಲು ರಾಷ್ಟ್ರಪತಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಈಚೆಗೆ ಭಾರತ ಮತ್ತು ಚೀನಾದ ನಡುವಿನ ಗುಲ್ವಾನ್ ಪ್ರದೇಶದಲ್ಲಿ ಚೀನಾದ ಸೈನಿಕರು ಭಾರತ ದೇಶದ ಗಡಿಯನ್ನು ದಾಟಿ ದೇಶದ ಸೈನಿಕರನ್ನು ಕ್ರೂರವಾಗಿ ಕೊಂದಿದ್ದಾರೆ. ಈ ದೇಶದ ಸೈನಿಕರು ಸತ್ತಾಗಿನಿಂದ ನನಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಕ್ತ ಕುದಿಯುತ್ತಿದೆ. ದೇಶ‌ ಸೇವೆ ಮಾಡಲು ಅವಕಾಶ ಮಾಡಿ ಕೊಡಿ ಎಂದು ದೇಶದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.