ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಜೊತೆಗೆ ವೆಂಟಿಲೇಟರ್ ಕೂಡ ಅತ್ಯವಶ್ಯವಾಗಿ ಬೇಕು. ಈಗಾಗಲೇ ಸರ್ಕಾರ ನಿಗದಿಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಕೊರೊನಾ ಸೋಂಕಿತರಿಗೆ‌ ಚಿಕಿತ್ಸೆ ನೀಡಲು ಅನುನತಿ ನೀಡಲಾಗಿದೆ.
ಸೋಂಕಿತರ ಬಗ್ಗೆ ಖಾಸಗಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ. ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿದ್ದು, ಆ ಆಸ್ಪತ್ರೆಗಳನ್ನೆ ಕೋವಿಡ್ 19 ಚಿಕಿತ್ಸೆಗೆ ನಿಯೋಜಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಪಾಲಿಸಬೇಕಾದ ನಿಯಮಗಳು


1) ಸೋಂಕಿತರಿಗೆ ಚಿಕಿತ್ಸೆಗಾಗಿ‌ ಸ್ಥಳೀಯ ಜಿಲ್ಲಾಧಿಕಾರಿ, ಬಿಬಿಎಂ ಕಮೀಷನರ್, ನಿರ್ದೇಶಕರು, ಡಿಎಚ್ಓ, ಡಿಎಲ್ಓ ಇತರರಿಂದ ಶಿಫಾರಸ್ಸು ಪತ್ರ ಪಡೆದವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

2) ಸೋಂಕಿತ ದಾಖಲಾದ ಕೂಡಲೇ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ತಕ್ಷಣ ಚಿಕಿತ್ಸೆ ಆರಂಭಿಸಬೇಕು.

3) ಸರ್ಕಾರದ ಚಿಕಿತ್ಸಾ ನಿಯಮಗಳನ್ನು ಕಾಲಕ್ಕೆ ತಕ್ಕಂತೆ ಪಾಲನೆ ಮಾಡಬೇಕು.

4) ಖಾಸಗಿ ಆಸ್ಪತ್ರೆಗಳಿಗೆ ನಿಗದಿ ಪಡಿಸಿದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ.ಪಾಟೀಲ್ ಕಿಡಿ

ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಗಲಾಟೆ, ಹೊಡೆದಾಟ, ಗೊಂದಲಗಳೇ ತುಂಬಿವೆ. ಬಿಜೆಪಿ ಸರ್ಕಾರಕ್ಕೆ ಅಥವಾ ಪಕ್ಷದವರಿಗೆ ಜನರ ಹಿತದ ಕಡೆ ಗಮನವೇ ಇಲ್ಲ ಎಂಬುವುದಕ್ಕೆ ಅವರ ರಾಜಕೀಯ ಕಿತ್ತಾಟಗಳೇ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ಹಿರೆಬಾವಿ ಪುಷ್ಕರಣೆಗೆ ಬೇಕಿದೆ ನಿರ್ವಹಣೆ

ಪವಿತ್ರ ಭಾವನೆಯಿಂದ ಕಾಣುವ ಪುಷ್ಕರಣೆಗಳೀಗ ನಿರ್ವಹಣೆ ಕೊರತೆಯಿಂದ ಕಸದ ತೊಟ್ಟಿಯಂತಾಗಿವೆ ಎನ್ನುವುದು ಸ್ಥಳೀಯರ ಆರೋಪ.

ನರೇಗಲ್: ಮತದಾನ ಎಂಬುದು ಪ್ರತಿಯೊಬ್ಬರ ಹಕ್ಕು- ಪಾಟೀಲ

ಮತದಾನ ಎಂಬುದು ಸಂವಿಧಾನ ನೀಡಿರುವ ಅತ್ಯಮೂಲ್ಯವಾದ ಹಕ್ಕು ಅದನ್ನು ಸಮರ್ಥವಾಗಿ ಬಳಸಿಕೊಂಡು ಎಲ್ಲರೂ ತಪ್ಪದೆ ಮತದಾನ ಮಾಡುವ ಅಗತ್ಯವಿದೆ ಎಂದು ಪ್ರಾಚಾರ್ಯ ವೈ.ಸಿ.ಪಾಟೀಲ ಹೇಳಿದರು.